ಬ್ರೇಕಿಂಗ್ ನ್ಯೂಸ್
24-09-21 05:14 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಇತ್ತೀಚೆಗೆ ತನ್ನ ಪತ್ನಿ ಮತ್ತು ಮಕ್ಕಳು ಕಾಣೆಯಾಗಿದ್ದಾರೆಂದು ನಗರದ ಅಶೋಕ ನಗರದಲ್ಲಿ ನೆಲೆಸಿರುವ ಮೂಲತಃ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೊಬ್ಬ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ, ಇಡೀ ಪ್ರಕರಣ ದೂರುದಾರನ ಕೊರಳನ್ನೇ ಸುತ್ತಿಕೊಂಡಿದೆ.
ಸೆ.18ರಂದು ರೇಣುಕಾ (30) ಮತ್ತು ಇಬ್ಬರು ಮಕ್ಕಳು ಕಾಣೆಯಾಗಿದ್ದಾಗಿ ಅಶೋಕ ನಗರದ ನಿವಾಸಿ ನಾಗರಾಜ ಹಾಲಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಇದಕ್ಕೂ ಮುನ್ನ ನಾಗರಾಜ್ ತನ್ನ ಊರಿಗೆ ತೆರಳಿದ್ದು, ಎರಡು ದಿನಗಳ ಹಿಂದೆ ಮಂಗಳೂರಿಗೆ ಮರಳಿ, ಮನೆಗೆ ತೆರಳಿದಾಗ ಪತ್ನಿ ಮತ್ತು ಮಕ್ಕಳು ಮನೆಯಲ್ಲಿ ಇರಲಿಲ್ಲ. ಬಾಡಿಗೆ ಮನೆಯಾಗಿದ್ದರಿಂದ ಮಾಲಕರ ಬಳಿ ಕೇಳಿದರೆ, ಆಕೆ ಆಂಟಿ ಮನೆಗೆಂದು ಮಕ್ಕಳ ಜೊತೆಗೆ ತೆರಳುವುದಾಗಿ ಹೇಳಿ ಹೋಗಿದ್ದಳು ಎಂದಿದ್ದರು. ಮರುದಿನವೂ ಬಾರದೇ ಇದ್ದುದರಿಂದ ನಾಗರಾಜ ಪೊಲೀಸರಿಗೆ ದೂರು ನೀಡಿದ್ದ.

ಪೊಲೀಸರು ಆನಂತರ ಆಕೆಯ ಮೊಬೈಲ್ ನಂಬರ್ ಪಡೆದು ತನಿಖೆ ನಡೆಸಿದಾಗ, ಆಕೆ ತನ್ನ ಊರು ಗದಗಕ್ಕೆ ತೆರಳಿರುವುದು ತಿಳಿದುಬಂದಿದೆ. ಅಲ್ಲದೆ, ರೇಣುಕಾಳ ನಿಜ ವಿಚಾರವೂ ಹೊರಬಂದಿದೆ. ಆಕೆಯ ಮೊದಲ ಗಂಡ ತೀರಿಕೊಂಡಿದ್ದು, ಆನಂತರ ನಾಗರಾಜ ಹಾಲಪ್ಪನ ಪರಿಚಯ ಆಗಿತ್ತು. ಈತನ ಜೊತೆ ಭವಿಷ್ಯ ಕಂಡುಕೊಳ್ಳಬಹುದೆಂಬ ಲೆಕ್ಕಾಚಾರದಲ್ಲಿ ಇಬ್ಬರು ಮಕ್ಕಳೊಂದಿಗೆ ಬಂದಿದ್ದು ಮಂಗಳೂರಿನ ಅಶೋಕ ನಗರದಲ್ಲಿ ಮನೆ ಮಾಡಿಕೊಂಡಿದ್ದರು.
ಅಲ್ಲಿ ನಾಗರಾಜ ಮತ್ತು ರೇಣುಕಾ ಗಂಡ – ಹೆಂಡತಿಯೆಂದೇ ಹೇಳಿಕೊಂಡಿದ್ದರು. ಸ್ಥಳೀಯರೆಲ್ಲ ಅದನ್ನೇ ನಂಬಿದ್ದರು. ಆದರೆ, ಇವರ ಮಧ್ಯೆ ಮದುವೆಯಾಗಿರಲಿಲ್ಲ. ಇತ್ತೀಚೆಗೆ, ನಾಗರಾಜನ ವರ್ತನೆಯಿಂದ ರೇಣುಕಾ ಬೇಸತ್ತಿದ್ದು, ಈತನ ಜೊತೆಗಿರುವುದಕ್ಕಿಂತ ಒಬ್ಬಂಟಿಯಾಗಿರುವುದೇ ಲೇಸು ಎಂದು ತೀರ್ಮಾನಿಸಿದ್ದಳು. ವಾರದ ಹಿಂದೆ ನಾಗರಾಜ ತನ್ನ ಊರಿಗೆಂದು ತೆರಳಿದ್ದ ಸಂದರ್ಭದಲ್ಲೇ ರೇಣುಕಾ ಕೂಡ ತನ್ನ ಮಕ್ಕಳೊಂದಿಗೆ ತನ್ನೂರಿಗೆ ಹೊರಟಿದ್ದಳು. ನಾಗರಾಜ ಹಿಂತಿರುಗಿ ಬಂದು ನೋಡಿದಾಗ, ಪತ್ನಿ, ಮಕ್ಕಳು ಇಲ್ಲದೆ ಚಿಂತೆಗೆ ಒಳಗಾಗಿದ್ದ. ಈಗ ರೇಣುಕಾ ತಾನು ತಾಯಿ ಜೊತೆಗೆ ಒಬ್ಬಂಟಿಯಾಗೇ ಇರುತ್ತೇನೆ. ನಾಗರಾಜನ ಸಹವಾಸ ಬೇಡ ಎಂದು ಪೊಲೀಸರಲ್ಲಿ ಹೇಳಿದ್ದಾಳೆ. ಈ ಬಗ್ಗೆ ಪೊಲೀಸರು ನಾಗರಾಜನಿಗೂ ವಿಷಯ ತಿಳಿಸಿದ್ದು, ನೀನೂ ಒಬ್ಬಂಟಿಯಾಗೇ ಇರು ಎಂದು ಸಲಹೆ ನೀಡಿದ್ದಾರೆ.
The case relating to a woman from Ashok Nagar here going missing with her two children has encountered a curious twist now. The person who complained to the police that his wife and two children had gone missing, was found to be not the missing woman's husband. This truth has come as a rude shock not only to the policemen but also the local people.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm