ಬ್ರೇಕಿಂಗ್ ನ್ಯೂಸ್
26-09-21 06:43 pm Mangaluru Correspondent ಕರಾವಳಿ
ಉಡುಪಿ, ಸೆ.26: ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಉಡುಪಿ ಮೂಲದ ಹೊಟೇಲ್ ಉದ್ಯಮಿಗೆ ಸೇರಿದ ರೆಸ್ಟೋರೆಂಟಿಗೆ ತೆರಳಿ, ಉಡುಪಿ ಖಾದ್ಯವನ್ನು ಸವಿದಿದ್ದಾರೆ.
ಬೈಂದೂರು ಮೂಲದ ಆನಂದ್ ಪೂಜಾರಿ ಮತ್ತು ಸುಮಿತಾ ದಂಪತಿ ಕಳೆದ 35 ವರ್ಷಗಳಿಂದ ಅಮೆರಿಕದಲ್ಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ವುಡ್ ಲ್ಯಾಂಡ್ಸ್ ಹೆಸರಲ್ಲಿ ಸ್ಟಾರ್ ಹೊಟೇಲ್ ನಡೆಸುತ್ತಿದ್ದಾರೆ. ಅಲ್ಲಿನ ಭಾರತೀಯರಿಗೆ ದಕ್ಷಿಣ ಭಾರತ ಶೈಲಿಯ ಆಹಾರ, ತಿನಿಸುಗಳನ್ನು ಮಾಡಿಕೊಡುತ್ತಿದ್ದಾರೆ. ಭಾರತೀಯ ಮೂಲದವರು, ಇಲ್ಲಿನ ಅಧಿಕಾರಿಗಳು, ಕೇಂದ್ರ ಸರಕಾರದ ಪ್ರತಿನಿಧಿಗಳು ವಾಷಿಂಗ್ಟನ್ ತೆರಳಿದರೇ ಇದೇ ಹೊಟೇಲಿಗೆ ಬಂದು ಆತಿಥ್ಯ ಪಡೆಯುತ್ತಾರೆ.

ಪ್ರಧಾನಿ ಮೋದಿ ವಾಷಿಂಗ್ಟನ್ ತೆರಳಿದ್ದರಿಂದ ಸೆ.24ರಂದು ಉಡುಪಿ ಮೂಲದ ಹೊಟೇಲ್ ನಲ್ಲಿ ಉಪಾಹಾರ ಸೇವಿಸಿದ್ದಾರೆ. ಇಡ್ಲಿ, ವಡೆ ಸಾಂಬಾರ್ ಮತ್ತು ಎರಡು ರೀತಿಯ ಸ್ವೀಟ್ ಐಟಂಗಳನ್ನು ಮೋದಿ ಸವಿದಿದ್ದಾರೆ. ಈ ಮೂಲಕ ಅಮೆರಿಕಕ್ಕೆ ತೆರಳಿದರೂ, ಉಡುಪಿ ಮೂಲದ ಖಾದ್ಯವನ್ನು ಸವಿಯುವ ಮೂಲಕ ಭಾರತೀಯ ಖಾದ್ಯಕ್ಕೆ ಮೋದಿ ಆದ್ಯತೆ ನೀಡಿದ್ದಾರೆ.
ಈ ವೇಳೆ, ಪ್ರಧಾನಿ ಮೋದಿ ಅವರನ್ನು ಆನಂದ್ ಪೂಜಾರಿ ದಂಪತಿ ಭೇಟಿಯಾಗಿದ್ದು, ಹಾರೈಕೆ ತಿಳಿಸಿದ್ದಾರೆ. ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ಬಡಿಯ ಪೂಜಾರಿ – ಗಿರಿಜಾ ದಂಪತಿಯ ಮಗ ಆನಂದ್ ಪೂಜಾರಿ, 35 ವರ್ಷಗಳಿಂದ ಅಮೆರಿಕದಲ್ಲಿದ್ದರೂ, ಪ್ರತಿ ವರ್ಷ ಊರಿಗೆ ಬರುತ್ತಾರೆ. ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಮೂರು ವರ್ಷಗಳಿಂದ ಊರಿಗೆ ಬಂದಿರಲಿಲ್ಲ.
ಆನಂದ ಪೂಜಾರಿ ದಂಪತಿ ನಾಲ್ಕನೇ ಬಾರಿಗೆ ಮೋದಿಯನ್ನು ಭೇಟಿಯಾಗಿದ್ದು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಕ್ವಾಡ್ ಮೀಟ್ ಸಲುವಾಗಿ ಸೆ.23ರಂದು ಅಮೆರಿಕಕ್ಕೆ ತೆರಳಿದ್ದ ಮೋದಿ, ವಿಶ್ವಸಂಸ್ಥೆಯಲ್ಲಿ ಭಾಷಣ ಸೇರಿದಂತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ ವಿಚಾರದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
Anand Poojary hosted the Prime Minister in United States and also took care of his diet. Anand Poojary along with his wife who have been living in Washington DC for about 35 years have been running Woodlands Hotel for 25 years,
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm