ಬ್ರೇಕಿಂಗ್ ನ್ಯೂಸ್
26-09-21 06:43 pm Mangaluru Correspondent ಕರಾವಳಿ
ಉಡುಪಿ, ಸೆ.26: ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಉಡುಪಿ ಮೂಲದ ಹೊಟೇಲ್ ಉದ್ಯಮಿಗೆ ಸೇರಿದ ರೆಸ್ಟೋರೆಂಟಿಗೆ ತೆರಳಿ, ಉಡುಪಿ ಖಾದ್ಯವನ್ನು ಸವಿದಿದ್ದಾರೆ.
ಬೈಂದೂರು ಮೂಲದ ಆನಂದ್ ಪೂಜಾರಿ ಮತ್ತು ಸುಮಿತಾ ದಂಪತಿ ಕಳೆದ 35 ವರ್ಷಗಳಿಂದ ಅಮೆರಿಕದಲ್ಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ವುಡ್ ಲ್ಯಾಂಡ್ಸ್ ಹೆಸರಲ್ಲಿ ಸ್ಟಾರ್ ಹೊಟೇಲ್ ನಡೆಸುತ್ತಿದ್ದಾರೆ. ಅಲ್ಲಿನ ಭಾರತೀಯರಿಗೆ ದಕ್ಷಿಣ ಭಾರತ ಶೈಲಿಯ ಆಹಾರ, ತಿನಿಸುಗಳನ್ನು ಮಾಡಿಕೊಡುತ್ತಿದ್ದಾರೆ. ಭಾರತೀಯ ಮೂಲದವರು, ಇಲ್ಲಿನ ಅಧಿಕಾರಿಗಳು, ಕೇಂದ್ರ ಸರಕಾರದ ಪ್ರತಿನಿಧಿಗಳು ವಾಷಿಂಗ್ಟನ್ ತೆರಳಿದರೇ ಇದೇ ಹೊಟೇಲಿಗೆ ಬಂದು ಆತಿಥ್ಯ ಪಡೆಯುತ್ತಾರೆ.
ಪ್ರಧಾನಿ ಮೋದಿ ವಾಷಿಂಗ್ಟನ್ ತೆರಳಿದ್ದರಿಂದ ಸೆ.24ರಂದು ಉಡುಪಿ ಮೂಲದ ಹೊಟೇಲ್ ನಲ್ಲಿ ಉಪಾಹಾರ ಸೇವಿಸಿದ್ದಾರೆ. ಇಡ್ಲಿ, ವಡೆ ಸಾಂಬಾರ್ ಮತ್ತು ಎರಡು ರೀತಿಯ ಸ್ವೀಟ್ ಐಟಂಗಳನ್ನು ಮೋದಿ ಸವಿದಿದ್ದಾರೆ. ಈ ಮೂಲಕ ಅಮೆರಿಕಕ್ಕೆ ತೆರಳಿದರೂ, ಉಡುಪಿ ಮೂಲದ ಖಾದ್ಯವನ್ನು ಸವಿಯುವ ಮೂಲಕ ಭಾರತೀಯ ಖಾದ್ಯಕ್ಕೆ ಮೋದಿ ಆದ್ಯತೆ ನೀಡಿದ್ದಾರೆ.
ಈ ವೇಳೆ, ಪ್ರಧಾನಿ ಮೋದಿ ಅವರನ್ನು ಆನಂದ್ ಪೂಜಾರಿ ದಂಪತಿ ಭೇಟಿಯಾಗಿದ್ದು, ಹಾರೈಕೆ ತಿಳಿಸಿದ್ದಾರೆ. ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ಬಡಿಯ ಪೂಜಾರಿ – ಗಿರಿಜಾ ದಂಪತಿಯ ಮಗ ಆನಂದ್ ಪೂಜಾರಿ, 35 ವರ್ಷಗಳಿಂದ ಅಮೆರಿಕದಲ್ಲಿದ್ದರೂ, ಪ್ರತಿ ವರ್ಷ ಊರಿಗೆ ಬರುತ್ತಾರೆ. ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಮೂರು ವರ್ಷಗಳಿಂದ ಊರಿಗೆ ಬಂದಿರಲಿಲ್ಲ.
ಆನಂದ ಪೂಜಾರಿ ದಂಪತಿ ನಾಲ್ಕನೇ ಬಾರಿಗೆ ಮೋದಿಯನ್ನು ಭೇಟಿಯಾಗಿದ್ದು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಕ್ವಾಡ್ ಮೀಟ್ ಸಲುವಾಗಿ ಸೆ.23ರಂದು ಅಮೆರಿಕಕ್ಕೆ ತೆರಳಿದ್ದ ಮೋದಿ, ವಿಶ್ವಸಂಸ್ಥೆಯಲ್ಲಿ ಭಾಷಣ ಸೇರಿದಂತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ ವಿಚಾರದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
Anand Poojary hosted the Prime Minister in United States and also took care of his diet. Anand Poojary along with his wife who have been living in Washington DC for about 35 years have been running Woodlands Hotel for 25 years,
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm