ಬ್ರೇಕಿಂಗ್ ನ್ಯೂಸ್
26-09-21 06:43 pm Mangaluru Correspondent ಕರಾವಳಿ
ಉಡುಪಿ, ಸೆ.26: ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಉಡುಪಿ ಮೂಲದ ಹೊಟೇಲ್ ಉದ್ಯಮಿಗೆ ಸೇರಿದ ರೆಸ್ಟೋರೆಂಟಿಗೆ ತೆರಳಿ, ಉಡುಪಿ ಖಾದ್ಯವನ್ನು ಸವಿದಿದ್ದಾರೆ.
ಬೈಂದೂರು ಮೂಲದ ಆನಂದ್ ಪೂಜಾರಿ ಮತ್ತು ಸುಮಿತಾ ದಂಪತಿ ಕಳೆದ 35 ವರ್ಷಗಳಿಂದ ಅಮೆರಿಕದಲ್ಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ವುಡ್ ಲ್ಯಾಂಡ್ಸ್ ಹೆಸರಲ್ಲಿ ಸ್ಟಾರ್ ಹೊಟೇಲ್ ನಡೆಸುತ್ತಿದ್ದಾರೆ. ಅಲ್ಲಿನ ಭಾರತೀಯರಿಗೆ ದಕ್ಷಿಣ ಭಾರತ ಶೈಲಿಯ ಆಹಾರ, ತಿನಿಸುಗಳನ್ನು ಮಾಡಿಕೊಡುತ್ತಿದ್ದಾರೆ. ಭಾರತೀಯ ಮೂಲದವರು, ಇಲ್ಲಿನ ಅಧಿಕಾರಿಗಳು, ಕೇಂದ್ರ ಸರಕಾರದ ಪ್ರತಿನಿಧಿಗಳು ವಾಷಿಂಗ್ಟನ್ ತೆರಳಿದರೇ ಇದೇ ಹೊಟೇಲಿಗೆ ಬಂದು ಆತಿಥ್ಯ ಪಡೆಯುತ್ತಾರೆ.

ಪ್ರಧಾನಿ ಮೋದಿ ವಾಷಿಂಗ್ಟನ್ ತೆರಳಿದ್ದರಿಂದ ಸೆ.24ರಂದು ಉಡುಪಿ ಮೂಲದ ಹೊಟೇಲ್ ನಲ್ಲಿ ಉಪಾಹಾರ ಸೇವಿಸಿದ್ದಾರೆ. ಇಡ್ಲಿ, ವಡೆ ಸಾಂಬಾರ್ ಮತ್ತು ಎರಡು ರೀತಿಯ ಸ್ವೀಟ್ ಐಟಂಗಳನ್ನು ಮೋದಿ ಸವಿದಿದ್ದಾರೆ. ಈ ಮೂಲಕ ಅಮೆರಿಕಕ್ಕೆ ತೆರಳಿದರೂ, ಉಡುಪಿ ಮೂಲದ ಖಾದ್ಯವನ್ನು ಸವಿಯುವ ಮೂಲಕ ಭಾರತೀಯ ಖಾದ್ಯಕ್ಕೆ ಮೋದಿ ಆದ್ಯತೆ ನೀಡಿದ್ದಾರೆ.
ಈ ವೇಳೆ, ಪ್ರಧಾನಿ ಮೋದಿ ಅವರನ್ನು ಆನಂದ್ ಪೂಜಾರಿ ದಂಪತಿ ಭೇಟಿಯಾಗಿದ್ದು, ಹಾರೈಕೆ ತಿಳಿಸಿದ್ದಾರೆ. ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ಬಡಿಯ ಪೂಜಾರಿ – ಗಿರಿಜಾ ದಂಪತಿಯ ಮಗ ಆನಂದ್ ಪೂಜಾರಿ, 35 ವರ್ಷಗಳಿಂದ ಅಮೆರಿಕದಲ್ಲಿದ್ದರೂ, ಪ್ರತಿ ವರ್ಷ ಊರಿಗೆ ಬರುತ್ತಾರೆ. ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಮೂರು ವರ್ಷಗಳಿಂದ ಊರಿಗೆ ಬಂದಿರಲಿಲ್ಲ.
ಆನಂದ ಪೂಜಾರಿ ದಂಪತಿ ನಾಲ್ಕನೇ ಬಾರಿಗೆ ಮೋದಿಯನ್ನು ಭೇಟಿಯಾಗಿದ್ದು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಕ್ವಾಡ್ ಮೀಟ್ ಸಲುವಾಗಿ ಸೆ.23ರಂದು ಅಮೆರಿಕಕ್ಕೆ ತೆರಳಿದ್ದ ಮೋದಿ, ವಿಶ್ವಸಂಸ್ಥೆಯಲ್ಲಿ ಭಾಷಣ ಸೇರಿದಂತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ ವಿಚಾರದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
Anand Poojary hosted the Prime Minister in United States and also took care of his diet. Anand Poojary along with his wife who have been living in Washington DC for about 35 years have been running Woodlands Hotel for 25 years,
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm