ಬ್ರೇಕಿಂಗ್ ನ್ಯೂಸ್
27-09-21 01:20 pm Mangaluru Correspondent ಕರಾವಳಿ
ಉಳ್ಳಾಲ, ಸೆ.27: ಹಿರಿಯ ಜನಪದ ವಿದ್ವಾಂಸರು, ಸಾಹಿತಿ ಪ್ರೊ.ಡಾ.ಅಮೃತ ಸೋಮೇಶ್ವರ ಅವರ 86ನೇ ಜನ್ಮದಿನದ ಪ್ರಯುಕ್ತ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ "ಗೌರವಶ್ರೀ" ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರದಾನ ಮಾಡಲಾಗುವ 2020ನೇ ಸಾಲಿನ ಗೌರವಶ್ರೀ ಪ್ರಶಸ್ತಿಗೆ ಮಂಗಳೂರಿನ ಹಿರಿಯ ಸಾಹಿತಿ ಮತ್ತು ಜನಪದ ವಿದ್ವಾಂಸರಾದ ಪ್ರೊ.ಡಾ.ಅಮೃತ ಸೋಮೇಶ್ವರ ಅವರನ್ನು ಆಯ್ಕೆ ಮಾಡಲಾಗಿತ್ತು. ಕಳೆದ ಸೆ.12 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿತ್ತು. ಅನಾರೋಗ್ಯದ ಕಾರಣ ಸಾಹಿತಿ ಅಮೃತರಿಗೆ ಬೆಂಗಳೂರಿಗೆ ತೆರಳಲು ಆಗಿರಲಿಲ್ಲ. ಇಂದು ಅಮೃತರ ಸೋಮೇಶ್ವರದ ಸ್ವಗೃಹ ಒಲುಮೆಯಲ್ಲಿ "ಗೌರವ ಶ್ರೀ" ಪ್ರಶಸ್ತಿಯನ್ನು ಪ್ರದಾನಿಸಲಾಯಿತು.



ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ವಿ ವಸಂತ್ ಕುಮಾರ್ ಮಾತನಾಡಿ ಅಮೃತರಂತಹ ಮಹಾನ್ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಿರುವುದರಿಂದ ಈ ಪ್ರಶಸ್ತಿಯ ಗೌರವ ಇಮ್ಮಡಿಯಾಗಿದೆ. ಅವರ ರಚನೆಯ "ಮಾನವತೆ ಗೆದ್ದಾಗ"ಎಂಬ ಕೃತಿಗೆ ಇಂದು ಅವರೇ ನಿದರ್ಶನರಾಗಿದ್ದಾರೆ. ಸುದೀರ್ಘ ಸಾಹಿತ್ಯ ಜೀವನದಲ್ಲಿ ಅವರು ಅಮೃತತ್ವವನ್ನು ಪ್ರಾಪ್ತಿಸಿದ್ದಾರೆ. ಅವರ ಜೀವನ ಶೈಲಿಯೇ ನಮಗೆಲ್ಲರಿಗೂ ಮಾದರಿ. ಅವರ ಮಾರ್ಗದರ್ಶನ ಅಕಾಡೆಮಿಗೆ ಮುಂದೆಯೂ ಅಗತ್ಯವಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಅಮೃತ ಸೋಮೇಶ್ವರ ಅವರು ಮನೆಯಲ್ಲೇ ಪ್ರಶಸ್ತಿ ಪ್ರದಾನದ ಸನ್ನಿವೇಶ ಸೃಷ್ಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ನನ್ನ ಪಾಡಿಗೆ ನಾನು ಸಾಹಿತ್ಯ ಸೇವೆ ಮಾಡಿಕೊಂಡು ಬಂದಿದ್ದೇನೆ. ಆಶೆ ,ಆಕಾಂಕ್ಷೆ ಇಲ್ಲದೆ ನನ್ನ ಇತಿ, ಮಿತಿಯಲ್ಲಿ ಮಾಡಿದ ಕೆಲಸವನ್ನ ಗಮನಿಸಿ ಗೌರವಿಸಿದಕ್ಕೆ ಕೃತಜ್ಞತೆ ಅರ್ಪಿಸಿದರು.


ಅಕಾಡೆಮಿ ಅಧ್ಯಕ್ಷರು, ಪದಾಧಿಕಾರಿಗಳು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಮೃತ ಸೋಮೇಶ್ವರ ಅವರು ಕೇಕ್ ಕತ್ತರಿಸಿ 86ನೇ ಹುಟ್ಟುದಿನವನ್ನ ಆಚರಿಸಲಾಯಿತು. ಅಮೃತರ ಮೊಮ್ಮಗಳಾದ ಸೃಷ್ಟಿ ಸೋಮೇಶ್ವರ ಅವರು ಅಜ್ಜನದ್ದೇ ಸಾಹಿತ್ಯದ 'ಎಂಚಿತ್ತಿ ಮಗನ್ ಪಡೆಯಲ್ ಪಾರ್ವತಿ...' ಎಂಬ ಭಕ್ತಿಗೀತೆಯನ್ನ ಹಾಡಿ ರಂಜಿಸಿದಳು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಆದ ಎನ್. ಕರಿಯಪ್ಪ , ಪದಾಧಿಕಾರಿಗಳಾದ ಹರೀಶ್ ಕುಮಾರ್, ಡಾ.ಬಿ.ಎಂ ಶರಭೇಂದ್ರ ಸ್ವಾಮಿ, ಮಂಗಳೂರು ಆಕಾಶವಾಣಿಯ ಸೂರ್ಯನಾರಾಯಣ ಭಟ್, ಅಮೃತ ಸೋಮೇಶ್ವರರ ಧರ್ಮ ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ, ಸೃಷ್ಟಿ ಸೋಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.
Ullal Tulu scholar and writer Dr Amrut Someshwar honoured by Sahitya Academy awards Gourawa Shree on 86th birthday. The program was held in Someshwar in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm