ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm