ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm