ಬ್ರೇಕಿಂಗ್ ನ್ಯೂಸ್
28-09-21 10:30 pm Headline Karnataka News Network ಕರಾವಳಿ
ಉಳ್ಳಾಲ, ಸೆ.28: ಉಳ್ಳಾಲದ ಅಬ್ಬಕ್ಕ ಸರ್ಕಲ್ ನಿಂದ ಓವರ್ ಬ್ರಿಡ್ಜ್ ತನಕದ ಚತುಷ್ಪಥ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗಲಿದ್ದು ಶಾಸಕ ಯು.ಟಿ ಖಾದರ್ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ತನಕದ ರಾಜ ರಸ್ತೆಯು ಶಾಸಕ ಯು.ಟಿ.ಖಾದರ್ ಮುತುವರ್ಜಿಯಿಂದ ವರ್ಷಗಳ ಹಿಂದೆ ಚತುಷ್ಪಥ ರಸ್ತೆಯಾಗಿ ಕಾಂಕ್ರಿಟೀಕರಣಗೊಂಡಿತ್ತು. ಇದೀಗ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ಸಂಪರ್ಕದ ಚತುಷ್ಪಥ ರಾಜ ರಸ್ತೆಯ ಇಕ್ಕೆಲಗಳಿಗೆ ಲೋಕೋಪಯೋಗಿ ಇಲಾಖೆಯ 4.30 ಕೋಟಿ ರೂಪಾಯಿ ಅನುದಾನದಿಂದ ಸರ್ವಿಸ್ ರಸ್ತೆ ನಿರ್ಮಾಣವಾಗಲಿದ್ದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ನೂತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.



ಈ ವೇಳೆ ಮಾತನಾಡಿದ ಖಾದರ್ ಬೆಳೆಯುತ್ತಿರುವ ಉಳ್ಳಾಲದ ಮುಖ್ಯ ರಸ್ತೆಯು ಸುಸಜ್ಜಿತ, ಸುಂದರವಾಗಿರಬೇಕು. ಉಳ್ಳಾಲದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿದ್ದು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಯಾವುದೇ ತೊಂದರೆಗಳಾಗದಂತೆ ತಡೆಯಲು ಸರ್ವಿಸ್ ರಸ್ತೆಯಲ್ಲೇ ಬೈಕ್ ಮತ್ತು ಸೈಕಲ್ ಸವಾರಿಗೆ ಸ್ಪೆಷಲ್ ಟ್ರ್ಯಾಕ್ ಒದಗಿಸಲಾಗಿದೆ. ಡ್ರೈನ್ ಮೇಲೆ ನಡೆದಾಡಲು ಪಾತ್ ವೇಯನ್ನೂ ಕಲ್ಪಿಸಲಾಗಿದೆ. ಮುಂದೆ ಅಬ್ಬಕ್ಕ ಸರ್ಕಲ್ ನಿಂದ ಮುಕ್ಕಚ್ಚೇರಿ ರಸ್ತೆಯನ್ನೂ ಸ್ಮಾರ್ಟ್ ರಸ್ತೆಯನ್ನಾಗಿಸಲು ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮೀಸಲಿಡಲಾಗಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು. ಉಳ್ಳಾಲದ ಕೋಟೆಪುರ, ಅಂಬಿಕಾ ರೋಡ್, ಉಳ್ಳಾಲ ಬೈಲ್ ಸೇರಿದಂತೆ ಅನೇಕ ಕಡೆ ಹೈಮಾಸ್ಟ್ ದೀಪಗಳನ್ನ ಅಳವಡಿಸಲಾಗುತ್ತಿದೆ ಎಂದರು.


ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷರಾದ ಆಯೂಬ್ ಮಂಚಿಲ, ನಗರಸಭಾ ಆಯುಕ್ತರಾದ ರಾಯಪ್ಪ, ಉಳ್ಳಾಲ ನಗರಸಭಾ ಮಾಜಿ ಅಧ್ಯಕ್ಷರಾದ ಮಹಮ್ಮದ್ ಮುಕ್ಕಚ್ಚೇರಿ, ಯು.ಎ ಇಸ್ಮಾಯಿಲ್, ಭಾಝಿಲ್ ಡಿಸೋಜ, ಸದಸ್ಯರಾದ ಭಾರತಿ, ಶಶಿಕಲಾ, ಸಪ್ನ ಹರೀಶ್, ವೀಣಾ ಡಿಸೋಜ, ರವಿಚಂದ್ರ ಗಟ್ಟಿ,ಪ್ರಮುಖರಾದ ಇಬ್ರಾಹಿಂ ,ಅಶ್ರಫ್,ಅಝೀಝ್ ಕೋಡಿ ,ಸುರೇಶ್ ಭಟ್ನಗರ ,ಮಹಿಳಾ ಕಾಂಗ್ರೆಸ್ನ ದೇವಕಿ,ಮುಸ್ತಫಾ ಅಬ್ದುಲ್ಲ, ಅದ್ದಾಮ ಮೇಲಂಗಡಿ,ರಫೀಕ್ ಮೇಲಂಗಡಿ,ಜಾಫರ್,ಲೋಕೋಪಯೋಗಿ ಇಂಜಿನಿಯರ್ ದಾಸ್ ಪ್ರಕಾಶ್, ಎ.ಇ ಚಂದ್ರಶೇಖರಯ್ಯ ಮೊದಲಾದವರು ಉಪಸ್ಥಿತರಿದ್ದರು.
Ullal Bike cycle riders get separate track founding laid by MLA UT Khader. The track will lead from Abbakka circle to Thokottu over bridge.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm