ಬ್ರೇಕಿಂಗ್ ನ್ಯೂಸ್
29-09-21 11:06 pm Mangaluru Correspondent ಕರಾವಳಿ
ಮಂಗಳೂರು, ಸೆ.29: ರೌಡಿಗಳು, ಪುಂಡು ಪೋಕರಿಗಳ ಅಟ್ಟಹಾಸದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ. ಪೊಲೀಸರ ಭಯವಿಲ್ಲದೆ ರೌಡಿಗಳು ಮೆರೆದಾಡುತ್ತಿದ್ದು ಆಡಳಿತ ಪಕ್ಷದ ರಾಜಕೀಯ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ರಾಜಕೀಯ ವ್ಯಕ್ತಿಗಳಿಗೆ ಗೌರವ ಕೊಡಬೇಕು. ಹಾಗೆಂದು ಕಾನೂನು ಪಾಲನೆಯಲ್ಲಿ ಲೋಪ ಆಗಬಾರದು. ಸಮಾಜದಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದಲ್ಲಿ ಕಠಿಣ ಶಿಕ್ಷೆ ವಿಧಿಸುವುದು ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಜವಾಬ್ದಾರಿ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದರು.
ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿದ್ದ ವಾಹನದ ಮೇಲೆ ದಾಳಿ ನಡೆಸಿ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದರಿಂದಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಎತ್ತ ಕಡೆ ಹೋಗುತ್ತಿದೆ ಎಂದು ಕೇಳಬೇಕಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಲಾಠಿಯನ್ನು ಒಳಗಿಟ್ಟುಕೊಂಡರೆ, ಪ್ರತಿಯೊಬ್ಬರೂ ಲಾಠಿ ಹಿಡಿದೇ ತಿರುಗಾಡಬೇಕಾದ ಸ್ಥಿತಿ ಬರುತ್ತದೆ. ಹಿಂದೆ ಈ ರೀತಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಾಗ ಸುಮೋಟೊ ಕೇಸ್ ದಾಖಲಿಸುವ ಸ್ಥಿತಿ ಜಿಲ್ಲೆಯಲ್ಲಿತ್ತು. ಆದರೆ, ಮೊನ್ನೆ ಯಾಕೆ ಈ ಕೆಲಸ ಆಗಿಲ್ಲ? ಯಾರ ಒತ್ತಡ ಇತ್ತು? ಎಂದು ಪ್ರಶ್ನಿಸಿದರು.

ಈ ರೀತಿ ದಾಳಿ ಮಾಡುವವರು ಸಮಾಜಘಾತುಕ ಶಕ್ತಿಗಳು. ನಿಜವಾದ ದೇಶದ್ರೋಹಿಗಳು ಅಂದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವವರು. ಪೊಲೀಸ್ ಇಲಾಖೆ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅಸಹಾಯಕತೆ ತೋರಿದರೆ ದ.ಕ. ಜಿಲ್ಲೆಯ ಅಭಿವೃದ್ಧಿ ಕುಠಿತವಾಗಲಿದೆ. ಕಾನೂನು ಸುವ್ಯವಸ್ಥೆ ಬಲಗೊಳಿಸಲು ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯ ಗೃಹ ಸಚಿವರ ಗಮನಕ್ಕೂ ತರಲಾಗುತ್ತದೆ ಎಂದು ಖಾದರ್ ಹೇಳಿದರು.
ಹಾನಗಲ್- ಸಿಂದಗಿ ಎರಡೂ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ
ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮೂರ್ಖರನ್ನಾಗಿ ಮಾಡಲು ಈ ರಾಜ್ಯದಲ್ಲಿ ಸಾಧ್ಯವಿಲ್ಲ ಎಂದು ಅಲ್ಲಿನ ಮತದಾರರು ತೋರಿಸಲಿದ್ದಾರೆ. ಇದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಸ್ವಾಭಿಮಾನದ, ಗೌರವದ ಚುನಾವಣೆ ಆಗಲಿದೆ ಎಂದು ಶಾಸಕ ಖಾದರ್ ಹೇಳಿದರು.
Mangalore UT Khader slams Bjp govt over moral policing in Surathkal says police have no power.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm