ಬ್ರೇಕಿಂಗ್ ನ್ಯೂಸ್
29-09-21 11:06 pm Mangaluru Correspondent ಕರಾವಳಿ
ಮಂಗಳೂರು, ಸೆ.29: ರೌಡಿಗಳು, ಪುಂಡು ಪೋಕರಿಗಳ ಅಟ್ಟಹಾಸದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ. ಪೊಲೀಸರ ಭಯವಿಲ್ಲದೆ ರೌಡಿಗಳು ಮೆರೆದಾಡುತ್ತಿದ್ದು ಆಡಳಿತ ಪಕ್ಷದ ರಾಜಕೀಯ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ರಾಜಕೀಯ ವ್ಯಕ್ತಿಗಳಿಗೆ ಗೌರವ ಕೊಡಬೇಕು. ಹಾಗೆಂದು ಕಾನೂನು ಪಾಲನೆಯಲ್ಲಿ ಲೋಪ ಆಗಬಾರದು. ಸಮಾಜದಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದಲ್ಲಿ ಕಠಿಣ ಶಿಕ್ಷೆ ವಿಧಿಸುವುದು ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಜವಾಬ್ದಾರಿ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದರು.
ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿದ್ದ ವಾಹನದ ಮೇಲೆ ದಾಳಿ ನಡೆಸಿ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದರಿಂದಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಎತ್ತ ಕಡೆ ಹೋಗುತ್ತಿದೆ ಎಂದು ಕೇಳಬೇಕಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಲಾಠಿಯನ್ನು ಒಳಗಿಟ್ಟುಕೊಂಡರೆ, ಪ್ರತಿಯೊಬ್ಬರೂ ಲಾಠಿ ಹಿಡಿದೇ ತಿರುಗಾಡಬೇಕಾದ ಸ್ಥಿತಿ ಬರುತ್ತದೆ. ಹಿಂದೆ ಈ ರೀತಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಾಗ ಸುಮೋಟೊ ಕೇಸ್ ದಾಖಲಿಸುವ ಸ್ಥಿತಿ ಜಿಲ್ಲೆಯಲ್ಲಿತ್ತು. ಆದರೆ, ಮೊನ್ನೆ ಯಾಕೆ ಈ ಕೆಲಸ ಆಗಿಲ್ಲ? ಯಾರ ಒತ್ತಡ ಇತ್ತು? ಎಂದು ಪ್ರಶ್ನಿಸಿದರು.
ಈ ರೀತಿ ದಾಳಿ ಮಾಡುವವರು ಸಮಾಜಘಾತುಕ ಶಕ್ತಿಗಳು. ನಿಜವಾದ ದೇಶದ್ರೋಹಿಗಳು ಅಂದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವವರು. ಪೊಲೀಸ್ ಇಲಾಖೆ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅಸಹಾಯಕತೆ ತೋರಿದರೆ ದ.ಕ. ಜಿಲ್ಲೆಯ ಅಭಿವೃದ್ಧಿ ಕುಠಿತವಾಗಲಿದೆ. ಕಾನೂನು ಸುವ್ಯವಸ್ಥೆ ಬಲಗೊಳಿಸಲು ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯ ಗೃಹ ಸಚಿವರ ಗಮನಕ್ಕೂ ತರಲಾಗುತ್ತದೆ ಎಂದು ಖಾದರ್ ಹೇಳಿದರು.
ಹಾನಗಲ್- ಸಿಂದಗಿ ಎರಡೂ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ
ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮೂರ್ಖರನ್ನಾಗಿ ಮಾಡಲು ಈ ರಾಜ್ಯದಲ್ಲಿ ಸಾಧ್ಯವಿಲ್ಲ ಎಂದು ಅಲ್ಲಿನ ಮತದಾರರು ತೋರಿಸಲಿದ್ದಾರೆ. ಇದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಸ್ವಾಭಿಮಾನದ, ಗೌರವದ ಚುನಾವಣೆ ಆಗಲಿದೆ ಎಂದು ಶಾಸಕ ಖಾದರ್ ಹೇಳಿದರು.
Mangalore UT Khader slams Bjp govt over moral policing in Surathkal says police have no power.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
13-06-25 11:09 pm
HK News Desk
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
13-06-25 09:36 pm
Mangalore Correspondent
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm