ಬ್ರೇಕಿಂಗ್ ನ್ಯೂಸ್
01-10-21 07:13 pm Mangaluru Correspondent ಕರಾವಳಿ
ಮಂಗಳೂರು, ಅ.1: ಉಚಿತ ಕೊಟ್ಟರೆ ಅದಕ್ಕೆ ಬೆಲೆ ಕಡಿಮೆ ಎನ್ನುತ್ತಾರೆ. ಕೊರೊನಾ ಲಸಿಕೆ ವಿಚಾರದಲ್ಲೂ ಈ ಮಾತು ನಿಜವಾಗುತ್ತಿದೆ. ದೇಶಾದ್ಯಂತ ಕೊರೊನಾ ಲಸಿಕೆಯನ್ನು ಸರಕಾರದಿಂದ ಉಚಿತ ನೀಡುತ್ತಿದ್ದರೆ, ಅದೆಷ್ಟೋ ಮಂದಿ ಲಸಿಕೆ ಪಡೆಯದೇ ಅಸಡ್ಡೆ ವಹಿಸಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಪ್ರತಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಬೇಕೆಂಬ ಗುರಿಯನ್ನು ಜಿಲ್ಲಾಡಳಿತಕ್ಕೆ ವಹಿಸಿದ್ದರೆ, ಹೆಚ್ಚಿನ ಕಡೆಗಳಲ್ಲಿ ಒಟ್ಟು ಜನಸಂಖ್ಯೆಯ 20 ಶೇಕಡಾ ಮಂದಿ ಲಸಿಕೆಯಿಂದಲೇ ದೂರ ಉಳಿದಿದ್ದಾರೆ.
ರಾಜ್ಯದಲ್ಲಿ ಮುಂದುವರಿದ ಜಿಲ್ಲೆಗಳೆನಿಸಿರುವ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೂ 90 ಶೇಕಡಾ ಗುರಿ ತಲುಪಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87 ಶೇಕಡಾ ಮಂದಿಗೆ ಲಸಿಕೆ ನೀಡಲಾಗಿದ್ದರೆ, ಇನ್ನೂ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಲಸಿಕೆ ಹಾಕಿಸದೆ ಉಳಿದುಕೊಂಡಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಈಗ ಲಸಿಕೆ ಪಡೆಯದ ಮಂದಿಯನ್ನು ಹುಡುಕುವ ಸ್ಥಿತಿ ಎದುರಾಗಿದೆ. ಎರಡು ಲಕ್ಷಕ್ಕೂ ಹೆಚ್ಚು ಮಂದಿಯ ಪತ್ತೆಗಾಗಿ ಜಿಲ್ಲಾಡಳಿತ ಈಗ ಪಟ್ಟಿ ರೆಡಿ ಮಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ 18 ವರ್ಷ ಮೇಲ್ಪಟ್ಟವರ ಪೈಕಿ 18 ಲಕ್ಷ ಮಂದಿಯನ್ನು ಲಸಿಕೆ ಹಾಕಿಸಲು ಗುರುತಿಸಿದ್ದು, ಯುದ್ಧೋಪಾದಿಯಲ್ಲಿ ಲಸಿಕಾ ಆಂದೋಲನ ಏರ್ಪಡಿಸಿತ್ತು. ವಿವಿಧ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳಿಂದ ಲಸಿಕಾ ಶಿಬಿರಗಳು ನಡೆದಿದ್ದರಿಂದ ಕೇವಲ ನಾಲ್ಕು ತಿಂಗಳಲ್ಲಿ ಗುರಿ ಪೂರೈಸುವತ್ತ ಸಾಗಿತ್ತು. ಇದರಂತೆ, ದ.ಕ. ಜಿಲ್ಲೆಯಲ್ಲಿ 15.66 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಎರಡು ಲಕ್ಷಕ್ಕೂ ಹೆಚ್ಚು ಜನ ಲಸಿಕೆಯಿಂದಲೇ ದೂರ ಉಳಿದಿದ್ದಾರೆ.
ಆರಂಭದಲ್ಲಿ ಕೊರೊನಾ ಲಸಿಕೆಯ ಬಗ್ಗೆ ಜನರಲ್ಲಿ ಗೊಂದಲ, ಅಪನಂಬಿಕೆ ಇತ್ತು. ಲಸಿಕೆ ತೆಗೆದುಕೊಂಡರೆ ಪುರುಷತ್ವ ನಾಶವಾಗುತ್ತದೆ ಎಂಬ ವದಂತಿ ಹರಡಿದ್ದರಿಂದ ಭಯವೂ ಕೆಲವರಲ್ಲಿತ್ತು. ಆದರೆ, ಸ್ವತಃ ತಜ್ಞರೇ ಲಸಿಕೆಯನ್ನು ಪಡೆದು ಭಯ ಪಡುವ ಅಗತ್ಯವಿಲ್ಲವೆಂದು ಜಾಗೃತಿ ಮೂಡಿಸಿದ್ದರು. ಹಳ್ಳಿ ಹಳ್ಳಿಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಲಸಿಕೆ ಪಡೆದು ಜನರ ಭಯ ನಿವಾರಿಸಿದ್ದರು. ಆದರೆ, ಇವೆಲ್ಲ ಮುಗಿದು ಎಲ್ಲರೂ ಲಸಿಕೆ ಪಡೆಯುತ್ತಿದ್ದರೆ, ಎರಡು ಲಕ್ಷ ಮಂದಿ ಒಂದು ಡೋಸ್ ಪಡೆಯುವುದಕ್ಕೂ ಬಾರದೆ ದೂರ ಉಳಿದಿದ್ದಾರೆ.

ಮಂಗಳೂರಿನಂಥ ನಗರದಲ್ಲೂ ಬಹಳಷ್ಟು ಮಂದಿ ಲಸಿಕೆ ಪಡೆಯದೆ ಉಳಿದುಕೊಂಡಿದ್ದಾರೆ ಎಂಬ ಮಾಹಿತಿಗಳಿವೆ. ಬಾಕಿ ಉಳಿಸಿಕೊಂಡವರ ಪೈಕಿ ಹೆಚ್ಚಿರುವುದು 45 ವರ್ಷಕ್ಕಿಂತ ಹೆಚ್ಚಿನವರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಕೆಲವರು ತಮ್ಮ ರೋಗ, ಇನ್ನಿತರ ಕಾರಣದಿಂದ ಲಸಿಕೆಯಿಂದ ದೂರ ಉಳಿದಿದ್ದರೆ, ಹಳ್ಳಿ ಪ್ರದೇಶಗಳಲ್ಲಿ ಕೊರೊನಾ ಭಯವೇ ತಮಗಿಲ್ಲ. ಲಸಿಕೆ ಯಾಕೆ ಬೇಕು ಎನ್ನುವ ಹುಂಬತನದಲ್ಲಿ ಅಸಡ್ಡೆ ವಹಿಸಿದ್ದಾರೆ ಎನ್ನಲಾಗುತ್ತಿದೆ.
Mangalore 20 percent of people don't want to get vaccinated, health administration in Trouble. 87 percent of the people have been vaccinated whereas 20 percent are totally far.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm