ಬ್ರೇಕಿಂಗ್ ನ್ಯೂಸ್
02-10-21 12:10 pm Mangaluru Correspondent ಕರಾವಳಿ
ಪುತ್ತೂರು, ಅ.2 : ರೇಬಿಸ್ ವೈರಸ್ ಸೋಂಕು ತಗುಲಿದ ಶಂಕೆಗೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕಡಬ ಬಳಿಯ ಆಲಂಕಾರಿನಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಈಕೆಗೆ ಗುರುವಾರ ಬೆಳಗ್ಗೆ ತೀವ್ರ ತಲೆನೋವು ಕಾಣಿಸಿಕೊಂಡಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಸಂಜೆ ವೇಳೆ ತಲೆನೋವು, ಮೈಕೈ ನೋವು ಉಲ್ಬಣಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿನ್ನಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ದಿನಗಳ ಹಿಂದೆ ರೇಬಿಸ್ಗೆ ಒಳಗಾಗಿ ಸಾವನ್ನಪ್ಪಿತ್ತು. ಮನೆ ನಾಯಿಯಿಂದ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸುತ್ತಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.
Puttur 17 year old girl dies after Dog bite rabies suspected. The deceased has been identified as Vincy Saramma. She was a PU student at a private college.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm