ಬ್ರೇಕಿಂಗ್ ನ್ಯೂಸ್
02-10-21 12:10 pm Mangaluru Correspondent ಕರಾವಳಿ
ಪುತ್ತೂರು, ಅ.2 : ರೇಬಿಸ್ ವೈರಸ್ ಸೋಂಕು ತಗುಲಿದ ಶಂಕೆಗೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕಡಬ ಬಳಿಯ ಆಲಂಕಾರಿನಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಈಕೆಗೆ ಗುರುವಾರ ಬೆಳಗ್ಗೆ ತೀವ್ರ ತಲೆನೋವು ಕಾಣಿಸಿಕೊಂಡಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಸಂಜೆ ವೇಳೆ ತಲೆನೋವು, ಮೈಕೈ ನೋವು ಉಲ್ಬಣಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿನ್ನಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ದಿನಗಳ ಹಿಂದೆ ರೇಬಿಸ್ಗೆ ಒಳಗಾಗಿ ಸಾವನ್ನಪ್ಪಿತ್ತು. ಮನೆ ನಾಯಿಯಿಂದ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸುತ್ತಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.
Puttur 17 year old girl dies after Dog bite rabies suspected. The deceased has been identified as Vincy Saramma. She was a PU student at a private college.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm