ಬ್ರೇಕಿಂಗ್ ನ್ಯೂಸ್
02-10-21 12:10 pm Mangaluru Correspondent ಕರಾವಳಿ
ಪುತ್ತೂರು, ಅ.2 : ರೇಬಿಸ್ ವೈರಸ್ ಸೋಂಕು ತಗುಲಿದ ಶಂಕೆಗೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕಡಬ ಬಳಿಯ ಆಲಂಕಾರಿನಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಈಕೆಗೆ ಗುರುವಾರ ಬೆಳಗ್ಗೆ ತೀವ್ರ ತಲೆನೋವು ಕಾಣಿಸಿಕೊಂಡಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಸಂಜೆ ವೇಳೆ ತಲೆನೋವು, ಮೈಕೈ ನೋವು ಉಲ್ಬಣಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿನ್ನಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ದಿನಗಳ ಹಿಂದೆ ರೇಬಿಸ್ಗೆ ಒಳಗಾಗಿ ಸಾವನ್ನಪ್ಪಿತ್ತು. ಮನೆ ನಾಯಿಯಿಂದ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸುತ್ತಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.
Puttur 17 year old girl dies after Dog bite rabies suspected. The deceased has been identified as Vincy Saramma. She was a PU student at a private college.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm