ಬ್ರೇಕಿಂಗ್ ನ್ಯೂಸ್
03-10-21 09:15 pm Mangaluru correspondent ಕರಾವಳಿ
ಮಂಗಳೂರು, ಅ.3: ನಗರ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕರು ಸಂಶಯಾಸ್ಪದ ನೆಲೆಯಲ್ಲಿ ಕಂಡುಬಂದಿದ್ದಾರೆಂದು ಬಜರಂಗದಳ ಕಾರ್ಯಕರ್ತರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಯುವಕ- ಯುವತಿಯರ ತಂಡ ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದಿರುವುದನ್ನು ಗಮನಿಸಿದ್ದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವತಿಯರಿಬ್ಬರ ಮನೆಯವರಿಗೂ ಪೊಲೀಸರು ಮಾಹಿತಿ ರವಾನಿಸಿದ್ದಾರೆ.
ಇಬ್ಬರು ಯುವತಿಯರಲ್ಲಿ ಒಬ್ಬಾಕೆ 16 ವರ್ಷದ ಅಪ್ರಾಪ್ತ ಹುಡುಗಿಯಾಗಿದ್ದು ಆಕೆಯ ಪೋಷಕರು ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. 16 ವರ್ಷದ ಹುಡುಗಿಯನ್ನು ಬಲವಂತದಿಂದ ಕರೆದೊಯ್ದಿದ್ದಾರೆ ಎಂದು ಆಕೆಯ ತಾಯಿ ಯುವಕರ ವಿರುದ್ಧ ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ, ಇಬ್ಬರು ಯುವಕರು ಮಾದಕ ದ್ರವ್ಯ ಸೇವಿಸಿದ್ದು ಕಂಡುಬಂದಿದೆ. ಈ ಬಗ್ಗೆ ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ. ಹೀಗಾಗಿ ಎನ್ ಡಿಪಿಎಸ್ ಏಕ್ಟಿನಡಿ ಕೇಸು ದಾಖಲಿಸಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಬೋಂದೆಲ್ ನಿವಾಸಿ ಧೀರಜ್ ಮತ್ತು ಪಂಜಿಮೊಗರಿನ ಶಾಕೀರ್ ಬಂಧಿತರು. ಇವರಿಬ್ಬರು ಸ್ನೇಹಿತರಾಗಿದ್ದು ಶಾಕಿರ್ ಕಾರಿನಲ್ಲಿ ಚಿಲಿಂಬಿ ಗುಡ್ಡೆಗೆ ತೆರಳಿದ್ದರು. ಅಲ್ಲಿಗೆ ಧೀರಜ್ ಲವರ್ ಎನ್ನಲಾದ ಒಬ್ಬಳು ಹುಡುಗಿಯನ್ನೂ ಕರೆದಿದ್ದು ಆಕೆ ತನ್ನ ಸ್ನೇಹಿತೆಯನ್ನೂ ಕರೆತಂದಿದ್ದಾಳೆ. ಗುಡ್ಡಕ್ಕೆ ತೆರಳುವುದನ್ನು ಗಮನಿಸಿದ್ದ ಬಜರಂಗದಳ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದಾರೆ.
Mangalore Muslim youth found inside car with Hindu girls at Gurupura, Bajpe have been arrested for consuming drugs and Pocso case have been registered as 16 year old Hindu girl was found inside the car. The incident came to light after VHP members informed the Cops.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm