ಬ್ರೇಕಿಂಗ್ ನ್ಯೂಸ್
03-10-21 09:15 pm Mangaluru correspondent ಕರಾವಳಿ
ಮಂಗಳೂರು, ಅ.3: ನಗರ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕರು ಸಂಶಯಾಸ್ಪದ ನೆಲೆಯಲ್ಲಿ ಕಂಡುಬಂದಿದ್ದಾರೆಂದು ಬಜರಂಗದಳ ಕಾರ್ಯಕರ್ತರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಯುವಕ- ಯುವತಿಯರ ತಂಡ ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದಿರುವುದನ್ನು ಗಮನಿಸಿದ್ದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವತಿಯರಿಬ್ಬರ ಮನೆಯವರಿಗೂ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

ಇಬ್ಬರು ಯುವತಿಯರಲ್ಲಿ ಒಬ್ಬಾಕೆ 16 ವರ್ಷದ ಅಪ್ರಾಪ್ತ ಹುಡುಗಿಯಾಗಿದ್ದು ಆಕೆಯ ಪೋಷಕರು ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. 16 ವರ್ಷದ ಹುಡುಗಿಯನ್ನು ಬಲವಂತದಿಂದ ಕರೆದೊಯ್ದಿದ್ದಾರೆ ಎಂದು ಆಕೆಯ ತಾಯಿ ಯುವಕರ ವಿರುದ್ಧ ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ, ಇಬ್ಬರು ಯುವಕರು ಮಾದಕ ದ್ರವ್ಯ ಸೇವಿಸಿದ್ದು ಕಂಡುಬಂದಿದೆ. ಈ ಬಗ್ಗೆ ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ. ಹೀಗಾಗಿ ಎನ್ ಡಿಪಿಎಸ್ ಏಕ್ಟಿನಡಿ ಕೇಸು ದಾಖಲಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಬೋಂದೆಲ್ ನಿವಾಸಿ ಧೀರಜ್ ಮತ್ತು ಪಂಜಿಮೊಗರಿನ ಶಾಕೀರ್ ಬಂಧಿತರು. ಇವರಿಬ್ಬರು ಸ್ನೇಹಿತರಾಗಿದ್ದು ಶಾಕಿರ್ ಕಾರಿನಲ್ಲಿ ಚಿಲಿಂಬಿ ಗುಡ್ಡೆಗೆ ತೆರಳಿದ್ದರು. ಅಲ್ಲಿಗೆ ಧೀರಜ್ ಲವರ್ ಎನ್ನಲಾದ ಒಬ್ಬಳು ಹುಡುಗಿಯನ್ನೂ ಕರೆದಿದ್ದು ಆಕೆ ತನ್ನ ಸ್ನೇಹಿತೆಯನ್ನೂ ಕರೆತಂದಿದ್ದಾಳೆ. ಗುಡ್ಡಕ್ಕೆ ತೆರಳುವುದನ್ನು ಗಮನಿಸಿದ್ದ ಬಜರಂಗದಳ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದಾರೆ.
Mangalore Muslim youth found inside car with Hindu girls at Gurupura, Bajpe have been arrested for consuming drugs and Pocso case have been registered as 16 year old Hindu girl was found inside the car. The incident came to light after VHP members informed the Cops.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm