ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm