ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm