ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm