ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm