ಬ್ರೇಕಿಂಗ್ ನ್ಯೂಸ್
06-10-21 01:54 pm Mangaluru Correspondent ಕರಾವಳಿ
ಮಂಗಳೂರು, ಅ.6: ಕರಾವಳಿಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಹಿಂದು ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ಕದ್ರಿ ಮಂಜುನಾಥ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲಿಸಬೇಕೆಂದು ಬೋರ್ಡ್ ಹಾಕಲಾಗಿತ್ತು. ಇದೀಗ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಕಡ್ಡಾಯ ಎಂದು ಬ್ಯಾನರ್ ಹಾಕಲಾಗಿದೆ.
ದೇವಸ್ಥಾನಗಳಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲನೆ ಮಾಡುವಂತಾಗಬೇಕು. ದೇವಸ್ಥಾನದ ಪಾವಿತ್ರ್ಯ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಡ್ಡಾಯವಾಗಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು. ಈ ಬಗ್ಗೆ ಮುಜರಾಯಿ ಇಲಾಖೆಯಿಂದಲೇ ನಿಯಮ ಜಾರಿಗೆ ತರಬೇಕು ಎಂದು ಧಾರ್ಮಿಕ ಪರಿಷತ್ ನಾಯಕರು ಸರಕಾರಕ್ಕೆ ಪತ್ರವನ್ನೂ ಬರೆದಿದ್ದರು. ಆದರೆ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಿದ್ದರೂ ದೇವಸ್ಥಾನಗಳ ಎದುರು ವಸ್ತ್ರ ಸಂಹಿತೆಯ ಬಗ್ಗೆ ಬೋರ್ಡ್ ಹಾಕಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರಿಗೆ ಪುರುಷರು ಧೋತಿ, ಪಂಚೆ ಅಥವಾ ಪ್ಯಾಂಟ್ ಧರಿಸಬಹುದು. ಮಹಿಳೆಯರು ಸೀರೆ ಅಥವಾ ಚೂಡಿದಾರ ಧರಿಸಿ ದೇವಸ್ಥಾನಕ್ಕೆ ಬರಬೇಕು ಎಂಬ ನಿಯಮದ ಬೋರ್ಡ್ ಹಾಕಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕೆಂದು ನಮ್ಮೆಲ್ಲರ ಅಭಿಪ್ರಾಯ. ಈ ಬಗ್ಗೆ ಸರ್ಕಾರ ನಿಯಮ ರೂಪಿಸಬೇಕು. ಇಲಾಖೆಯಿಂದ ಸಭೆ ನಡೆದಿದ್ದು, ಶೀಘ್ರದಲ್ಲೇ ವಸ್ತ್ರ ಸಂಹಿತೆ ಜಾರಿಯಾಗುವ ವಿಶ್ವಾಸ ಇದೆ ಎಂದಿದ್ದಾರೆ.
ಇದೇ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಟೀಲು ದೇವಸ್ಥಾನದ ಹರಿನಾರಾಯಣ ಆಸ್ರಣ್ಣ, ಹಿಂದು ಸಂಪ್ರದಾಯದಂತೆ ವಸ್ತ್ರ ಧರಿಸಿ ಬರುವಂತೆ ಇದು ಮನವಿಯಷ್ಟೇ. ಯಾವುದೇ ಕಡ್ಡಾಯ ನಿಯಮ ವಿಧಿಸಿಲ್ಲ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶವೂ ಬಂದಿಲ್ಲ. ಆದರೆ ದೇವಸ್ಥಾನದ ಪಾವಿತ್ರ್ಯ ಉಳಿಸುವ ನಿಟ್ಟಿನಲ್ಲಿ ಈ ರೀತಿಯ ಸಂಪ್ರದಾಯ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.
A board prominently displayed recently in Kateel Goddess Durgaparameshwari temple advises the visitors to be dressed in traditional Hindu attire. The temple sources revealed that the temple has not received any official order in this connection. However, they clarified that the purpose of prescribing dress code is to create awareness among the people coming to the temple. "The temple is a sacred place where the environment should be conducive to give rise to sentiments of devotion and faith. Many temples are creating awareness among the people in this way," the temple sources stated.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm