ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm