ಬ್ರೇಕಿಂಗ್ ನ್ಯೂಸ್
09-10-21 03:51 pm Mangalore Reporter ಕರಾವಳಿ
ಉಳ್ಳಾಲ, ಅ.9 : ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಮತ್ತು ಹಿಂಸಾಚಾರವನ್ನ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟಿನಲ್ಲಿ ಜಿಹಾದಿ ಪ್ರತಿಕೃತಿಯನ್ನ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದು ಸಂಘಟನೆ ಮುಖಂಡ ಆಶಿಕ್ ಮಾಡೂರು ಮಾತನಾಡಿ, ಕಾಶ್ಮೀರದಲ್ಲಿ ಆರ್ಟಿಕಲ್ 370 ಕಾಯ್ದೆಯನ್ನ ರದ್ದು ಮಾಡಿದ ಪರಿಣಾಮ ಪಾಕಿಸ್ಥಾನಿ ಜಿಹಾದಿಗಳು, ಕಾಶ್ಮೀರದ ಮುಸ್ಲಿಂ ಮೂಲಭೂತವಾದಿಗಳಲ್ಲಿ ನಡುಕ ಹುಟ್ಟಿದೆ. ಅದಕ್ಕಾಗಿ ಈಗ ಅಲ್ಲಿನ ಹಿಂದುಗಳನ್ನ ಹುಡುಕಿ ಹತ್ಯೆ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಸದಾ ನೈತಿಕ ಬೆಂಬಲ ನೀಡುತ್ತದೆ. ಎಂಬತ್ತು ಶೇಕಡ ಹಿಂದೂಗಳು ಜಾತಿ ಭೇದ ಮರೆತು ಒಂದಾಗಿ ಜಿಹಾದಿಗಳ ವಿರುದ್ಧ ಸೆಟೆದು ನಿಂತರೆ ಭಾರತದಲ್ಲಿ ನೆಲೆಸುವ ಪ್ರತಿಯೊಬ್ಬರೂ ವಂದೇ ಮಾತರಂ, ಜೈ ಶ್ರೀರಾಂ ಹೇಳಲೇಬೇಕಾದ ಕಾಲ ಬರುತ್ತದೆ ಎಂದರು.

ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಲ್ಲಿ ಪಾಕಿಸ್ಥಾನ, ಭಾರತ ಎಂದು ದೇಶವನ್ನ ವಿಂಗಡಿಸಲಾಯಿತು. ಆದರೂ ಇಂದಿಗೂ ಮೂವತ್ತು ಶೇಕಡ ಕಾಶ್ಮೀರ ನಮ್ಮ ಕೈ ತಪ್ಪಲು ಯಾರು ಕಾರಣರೆಂದು ದೇಶದ ಜನರಿಗೆ ತಿಳಿದಿದೆ ಎಂದರು.

ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮಾತನಾಡಿ ಕಾಶ್ಮೀರಿ ಪಂಡಿತರನ್ನ ಅಲ್ಲಿನ ಮೂಲ ನಿವಾಸಿಗಳೆಂದು ಪರಿಗಣಿಸಿದರೂ ಸಹ ಅಲ್ಲಿನ ಮುಸ್ಲಿಂ ಮೂಲಭೂತವಾದಿಗಳು, ಜಿಹಾದಿಗಳು ಹಿಂದೂಗಳ ಹತ್ಯೆ ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ಕ್ರಿಮಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಗೌರವಾಧ್ಯಕ್ಷರಾದ ಹರಿದಾಸ್ ಮಾಡೂರು, ಪ್ರಮುಖರಾದ ಪದ್ಮನಾಭ ಮರ್ಕೆದು, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸತೀಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Bajrang Dal had given a nation wide call to hold protests against the assassination of Hindus and atrocities heaped on them in Kashmir.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm