ಬ್ರೇಕಿಂಗ್ ನ್ಯೂಸ್
10-10-21 08:29 pm Mangalore Reporter ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ, ದೇವರ ಹೆಸರಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಿನ ನಿತ್ಯ ನಡೆಸುತ್ತಿರುವ ಅನೈತಿಕ ಗೂಂಡಾಗಿರಿ ಅನ್ನೋದು ಚುನಾವಣಾ ಮುನ್ನೆಲೆಯ ತಯಾರಿ. ಈ ಮಾದರಿಯ ಅನೈತಿಕ ಗೂಂಡಾಗಿರಿಯ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಭರತ್ ಶೆಟ್ಟಿ ಕೈವಾಡವಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಅನೈತಿಕ ಗೂಂಡಾಗಿರಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಡಿವೈಎಫ್ಐ ಮಂಗಳೂರು ನಗರ ಸಮಿತಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಂಘ ಪರಿವಾರ ಅಮಾಯಕ ವಿದ್ಯಾರ್ಥಿ ಯುವಜನರ ಮೇಲೆ ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿ ಜಿಲ್ಲೆಯ ಕೋಮು ಸಾಮರಸ್ಯವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ. ಜಿಲ್ಲೆಯ ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ನಡೆಸುವವರ ಮೇಲೆ ಯಾವುದೇ ಕ್ರಮವನ್ನು ಕೈಗೊಳ್ಳದೆ ಸಂಘ ಪರಿವಾರಕ್ಕೆ ಸಂಪೂರ್ಣ ಶರಣಾಗತಿಯಾದಂತೆ ವರ್ತಿಸುತ್ತಿದೆ. ಬಿಜೆಪಿ ಧರ್ಮ, ದೇವರ ಹೆಸರಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಗಮನವನ್ನು ತಮ್ಮನ್ನು ಕಾಡುವ ಮೂಲ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಜಿಲ್ಲೆಯಲ್ಲಿ ಉದ್ಯೋಗದ ಪ್ರಶ್ನೆ, ಆರೋಗ್ಯದ ಪ್ರಶ್ನೆ , ಶಿಕ್ಷಣದ ಹೆಸರಲ್ಲಿ ನಡೆಸುವ ದಂಧೆಗಳ ವಿರುದ್ಧ ಯಾವೊಂದು ವಿಚಾರಗಳನ್ನು ಬಿಜೆಪಿ ಇತ್ಯರ್ಥ ಪಡಿಸಲು ಗಮನಹರಿಸುತ್ತಿಲ್ಲ. ಕೇವಲ ಜನರನ್ನು ಪರಸ್ಪರ ಎತ್ತಿಕಟ್ಟಿ ಸಂಘರ್ಷಕ್ಕೆ , ಕೋಮು ಹಿಂಸೆಗೆ ಪ್ರೇರಣೆ ಮೂಡಿಸಲು, ಆಮೂಲಕ ಪರೋಕ್ಷವಾಗಿ ಸಾಮಾನ್ಯ ಜನರ ಸಾವು, ನೋವನ್ನು ಬಯಸುವ ಪ್ರಯತ್ನದಲ್ಲಿದೆ. ಇಂತಹ ಪ್ರಯತ್ನಗಳಿಗೆ ಜಿಲ್ಲೆಯ ಪ್ರಜ್ಞಾವಂತ ಜನ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದರು.

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜೆಡಿಎಸ್ ಮಹಿಳಾ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಮನೋಜ್ ವಾಮಂಜೂರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷರಾದ ರಫೀಕ್ ಹರೇಕಳ, ಕಾರ್ಯದರ್ಶಿ ಸುನಿಲ್ ತೇವುಲ, ಡಾ.ಕೃಷ್ಣಪ್ಪ ಕೊಂಚಾಡಿ, ಜೇರಾಲ್ಡ್ ಟವರ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಅಲ್ತಾಫ್ ತುಂಬೆ, ಕೃಷ್ಣ ತಣ್ಣೀರುಬಾವಿ ಮುಂತಾದವರು ಉಪಸ್ಥಿತರಿದ್ದರು.
reason behind moral policing is nalin kumar kateel and bharath shetty says DYFI president muneer kaatipalla
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm