ಬ್ರೇಕಿಂಗ್ ನ್ಯೂಸ್
12-10-21 01:27 pm Mangalore Reporter ಕರಾವಳಿ
ಪುತ್ತೂರು, ಅ.12 : ಕೆಎಸ್ ಆರ್ ಟಿಸಿ ಬಸ್ ಚಾಲಕನ ಧಾವಂತಕ್ಕೆ ತಾಯಿ, ಮಗು ಪ್ರಾಣ ಕಳಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಾಯಿ ತನ್ನ ಒಂದು ವರ್ಷದ ಮಗುವಿನ ಜೊತೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಅವರ ಮೇಲಿನಿಂದ ಹರಿದು ದುರಂತ ಸಂಭವಿಸಿದೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ವೈದ್ಯರ ಬಳಿಗೆಂದು ಪುತ್ತೂರಿಗೆ ಮಗುವಿನ ಜೊತೆ ಹೊರಟಿದ್ದರು.
ಬಸ್ ಬಂತೆಂದು ತಿಳಿದು ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ರಸ್ತೆ ದಾಟಿದ್ದರು. ಇದೇ ವೇಳೆ ಯಮದೂತನಂತೆ ನುಗ್ಗಿದ ಬಸ್, ತಾಯಿ ಮಗುವಿನ ಮೇಲೆ ಹರಿದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕ್ಷಣಕಾಲದಲ್ಲಿ ನಡೆದು ಹೋಗಿದ್ದ ಘಟನೆಯಿಂದಾಗಿ ತಾಯಿ, ಮಗುವಿನ ಪ್ರಾಣ ಹೋಗಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದು ಬಳಿಕ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ.
In an unfortunate incident, a woman and her one-and-half-year-old son were killed in a road accident on Tuesday October 12. The deceased are identified as Shahida (25), wife of Siddiq, a resident of Shirlal in Beltangady taluk and her son Shaheel.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm