ಬ್ರೇಕಿಂಗ್ ನ್ಯೂಸ್
13-10-21 10:58 pm Mangaluru Correspondent ಕರಾವಳಿ
ಮಂಗಳೂರು, ಅ.13: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದರಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಆದಾಗ್ಯೂ ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಅಂದು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಯಾವುದೇ ಸಮಸ್ಯೆ ಸ್ಥಳದಲ್ಲೇ ಬಗೆಹರಿಯದ್ದಿದ್ದಲ್ಲಿ, ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.
ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮಚಿತ ವರ್ತನಗಳನ್ನು ಪಾಲನೆ ಮಾಡುವಂತೆ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Mangalore DC Rajendra to visit Sullia to give government awareness.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm