ಬ್ರೇಕಿಂಗ್ ನ್ಯೂಸ್
13-10-21 10:58 pm Mangaluru Correspondent ಕರಾವಳಿ
ಮಂಗಳೂರು, ಅ.13: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದರಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಆದಾಗ್ಯೂ ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಅಂದು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಯಾವುದೇ ಸಮಸ್ಯೆ ಸ್ಥಳದಲ್ಲೇ ಬಗೆಹರಿಯದ್ದಿದ್ದಲ್ಲಿ, ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.
ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮಚಿತ ವರ್ತನಗಳನ್ನು ಪಾಲನೆ ಮಾಡುವಂತೆ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Mangalore DC Rajendra to visit Sullia to give government awareness.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm