ಬ್ರೇಕಿಂಗ್ ನ್ಯೂಸ್
14-10-21 10:35 pm Mangaluru Correspondent ಕರಾವಳಿ
ಮಂಗಳೂರು, ಅ.14: ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪರ - ವಿರೋಧ ನಡುವೆ, ಮತ್ತೊಂದೆಡೆ ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ, ಅದಕ್ಕೆ ಕೇಳಿ ಬರುತ್ತಿರುವ ಆಕ್ರೋಶ, ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್, ಬಜರಂಗದಳದ ನಾಯಕರು ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೆಪದಲ್ಲಿ ಶಸ್ತ್ರಗಳನ್ನು ಹಂಚಿದ್ದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಿ, ಶಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ. ಬಜರಂಗದಳ ಮುಖಂಡ ರಘು ಸಕಲೇಶಪುರ ಮತ್ತು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕದ್ರಿಯ ವಿಹಿಂಪ ಕಚೇರಿಯಲ್ಲಿ ತ್ರಿಶೂಲ ನೆಪದಲ್ಲಿ ಹರಿತ ಕತ್ತಿಯನ್ನು ನೀಡಿದ್ದಾರೆ. ಅಲ್ಲದೆ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿ ಪ್ರತಿಜ್ಞೆ ಉಪದೇಶ ಮಾಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಿಎಂ ಸಮರ್ಥನೆ ಬೆನ್ನಲ್ಲೇ ಹಿಂದು ಸಂಘಟನೆ ನಾಯಕರು, ತಮ್ಮ ಕಾರ್ಯಕರ್ತರಿಗೆ ಶಸ್ತ್ರ ಹಂಚಿದ್ದಾರೆಂದು ಟೀಕಿಸಲಾಗಿದೆ.



ಒಂದು ಕಡೆ ಮತಾಂತರ ವಿರುದ್ಧ ಜಾಗೃತಿ, ಹೋರಾಟ ಕೈಗೆತ್ತಿಕೊಂಡಿರುವ ಹಿಂದು ಸಂಘಟನೆಗಳು ಇದೀಗ ಕಾರ್ಯಕರ್ತರ ಕೈಗೆ ಬಹಿರಂಗವಾಗಿಯೇ ಶಸ್ತ್ರಗಳನ್ನು ಕೊಟ್ಟು ಯಾವ ಸಂದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆತ್ಮರಕ್ಷಣೆ ಮತ್ತು ಸ್ವರಕ್ಷಣೆಗಾಗಿ ಶಸ್ತ್ರ ಅಗತ್ಯ ಎನ್ನುವ ಸಮರ್ಥನೆ ನೀಡುತ್ತಿದ್ದರೂ, ಈಗಿನ ಸನ್ನಿವೇಶ ಮಾತ್ರ ಶಸ್ತ್ರಗಳ ಹಂಚಿಕೆಗೆ ಬೇರೆಯದೇ ಅರ್ಥವನ್ನು ನೀಡಿದೆ. ಹೀಗಾಗಿ ಹಿಂದು ಸಂಘಟನೆಗಳ ಈ ರೀತಿಯ ನಡೆ ಟೀಕೆಗೆ ಗುರಿಯಾಗಿದ್ದು ಬಿಜೆಪಿ ಸರಕಾರದ ಆಡಳಿತದಲ್ಲಿ ವಿವಾದಕ್ಕೆ ಕಾರಣವಾಗಿದೆ.
Mangalore Vhp and Bajarang dal members with Trishul goes viral after CM Bommai Statement on Moral Policing creating controversy.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm