ಬ್ರೇಕಿಂಗ್ ನ್ಯೂಸ್
11-09-20 12:21 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳೂರಿನ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ಜಪ್ಪಿನಮೊಗರು, ಕುಡುಪಾಡಿ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಅಲ್ಲಿದ್ದ ನಿವಾಸಿಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಆರು ಮನೆಗಳ ನಿವಾಸಿಗಳು ನಿನ್ನೆ ರಾತ್ರಿಯೇ ಮನೆ ಬಿಟ್ಟು ಬೇರೆಡೆ ತೆರಳಿದ್ದರು. ಇಂದು ಬೆಳಗ್ಗೆ ಮತ್ತಷ್ಟು ಮನೆಗಳಿಗೆ ನೀರು ನುಗ್ಗಿದ್ದು ಅರ್ಧಕ್ಕೂ ಹೆಚ್ಚು ಮಟ್ಟದಲ್ಲಿ ಮನೆಗಳು ಮುಳುಗಡೆಯಾಗಿದೆ. ಪ್ರತಿ ಬಾರಿ ಜಪ್ಪಿನಮೊಗರಿನ ಕಂರ್ಭಿಸ್ಥಾನ ಏರಿಯಾದಲ್ಲಿ ಮಳೆನೀರು ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿತ್ತು. ಈ ಬಾರಿ ಹೆದ್ದಾರಿಯ ಬಲಭಾಗದಲ್ಲಿ ಮಳೆನೀರು ಹರಿಯಲು ಸಾಧ್ಯವಾಗದೆ ಆ ಭಾಗದ ಮನೆಗಳಿಗೆ ನುಗ್ಗಿದೆ. ಗದ್ದೆ ಇದ್ದ ಜಾಗಕ್ಕೆ ಮಣ್ಣು ತುಂಬಿದ್ದರಿಂದ ನೀರು ಹರಿದು ಹೋಗಲು ಜಾಗ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಅಕ್ಕಪಕ್ಕದ ಮನೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಕೆಲವರು ಮನೆ ಬಿಟ್ಟು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಸಾಮಗ್ರಿಗಳನ್ನು ಉಳಿಸಿ ಬೇರೆಡೆ ಹೋದರೆ ಹೇಗೆ ಎನ್ನುವ ಪ್ರಶ್ನೆ ಮುಂದಿಡುತ್ತಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂಥ ಅವಸ್ಥೆ ಆಗಿದೆ ಎನ್ನುತ್ತಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಅಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.

ಇನ್ನು ಮಂಗಳೂರಿನ ಕೊಟ್ಟಾರ ಚೌಕಿಯಲ್ಲೂ ಕೃತಕ ನೆರೆ ಸೃಷ್ಟಿಯಾಗಿದ್ದು ರಾಷ್ಟ್ರೀಯ ಹೆದ್ದಾರಿ ಮುಳುಗಡೆಯಾಗಿದೆ. ನಿನ್ನೆ ಸಂಜೆಯಿಂದಲೇ ನಿರಂತರ ಮಳೆಯಿಂದಾಗಿ ಕೊಟ್ಟಾರ ಹೆದ್ದಾರಿಯಲ್ಲಿ ನೀರು ನುಗ್ಗಿದ್ದು ವಾಹನ ಸಂಚಾರ ತೊಂದರೆಗೀಡಾಗಿತ್ತು. ಅವ್ಯವಸ್ಥೆ ಇಂದು ಕೂಡ ಮುಂದುವರಿದಿದೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಇಡೀ ನಿರಂತರ ಮಳೆಯಾಗಿದ್ದು ಆತಂಕ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ.
Join our WhatsApp group for latest news updates
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm