ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm