ಬ್ರೇಕಿಂಗ್ ನ್ಯೂಸ್
11-09-20 02:18 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಭಾರೀ ಮಳೆ ಮತ್ತು ಗಾಳಿಯಿಂದಾಗಿ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 24 ಮಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಭಟ್ಕಳದಿಂದ ತೆರಳಿದ್ದ ಬೋಟ್ ಗಾಳಿಮಳೆಗೆ ಮುಳುಗುವ ಭೀತಿ ಎದುರಾಗಿತ್ತು. ಅಲ್ಲದೆ, ಬೋಟಿನಲ್ಲಿ ತಾಂತ್ರಿಕ ತೊಂದರೆಯೂ ಕಾಣಿಸಿಕೊಂಡಿದ್ದರಿಂದ ಮೀನುಗಾರರು ಮೀನುಗಾರಿಕಾ ಇಲಾಖೆಗೆ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದರು. ಭಟ್ಕಳದಿಂದ 17 ನಾಟಿಕಲ್ ಮೈಲ್ ದೂರದಲ್ಲಿ ಘಟನೆ ನಡೆದಿತ್ತು.
ಭಾರತೀಯ ತಟರಕ್ಷಣಾ ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಎಲ್ಲ 24 ಮಂದಿಯನ್ನು ಸುರಕ್ಷಿತವಾಗಿ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ಅಪಾಯದಲ್ಲಿತ್ತು . ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ, ರಕ್ಷಣೆಗೆ ಮನವಿ ಮಾಡಿದ್ದರು. ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭಾರತೀಯ ತಟ ರಕ್ಷಣಾ ಪಡೆಗೆ ಮಾಹಿತಿ ರವಾನಿಸಿದ್ದರು.
ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕಸ್ತೂರಬಾ ಗಾಂಧಿ ಹಡಗು ಕೂಡಲೇ ಮಾಹಿತಿಗೆ ಸ್ಪಂದಿಸಿ, ಮೀನುಗಾರರು ಹಾಗೂ ಬೋಟ್ ಅನ್ನು ದಡಕ್ಕೆ ಕರೆತಂದಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am