ಬ್ರೇಕಿಂಗ್ ನ್ಯೂಸ್
20-10-21 01:37 pm Mangaluru Correspondent ಕರಾವಳಿ
ಮಂಗಳೂರು, ಅ.20: ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು ಎಂದು ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ.




ಇದಕ್ಕೆ ಪ್ರತೀಕಾರ ತೀರಿಸಲು ಐವಾನ್ ಡಿಸೋಜ ಅವರ ವೆಲೆನ್ಸಿಯಾದ ಮನೆಗೆ ಮುತ್ತಿಗೆ ಹಾಕಿ, ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹಲವು ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ.
ಪ್ರಕರಣ ಸಂಬಂಧಿಸಿ ಐವನ್ ಡಿಸೋಜ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Mangalore Bajrang Dal members protest at Congress Leader Ivan Dsouza House for remarks on kesari shawl.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm