ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm