ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm