ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm