ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm