ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm