ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm