ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm