ಬ್ರೇಕಿಂಗ್ ನ್ಯೂಸ್
23-10-21 07:08 pm Headline Karnataka News Network ಕರಾವಳಿ
ಬೆಂಗಳೂರು, ಅ.22: ಸಿಎಎ ಕಾಯ್ದೆ ವಿರೋಧಿಸಿ 2019ರ ಡಿಸೆಬರ್ 19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಮತ್ತು ಗೋಲಿಬಾರ್ ಘಟನೆಯಲ್ಲಿ ಪೊಲೀಸರ ಕಡೆಯಿಂದ ಯಾವುದೇ ತಪ್ಪು ಆಗಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟಿಗೆ ಹೇಳಿದೆ. ಅಲ್ಲದೆ, ಘಟನೆಯ ಬಗ್ಗೆ ನಡೆಸಿದ ಮ್ಯಾಜಿಸ್ಟೀರಿಯಲ್ ತನಿಖೆಯಲ್ಲಿ ಪೊಲೀಸರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಗೋಲಿಬಾರ್ ಘಟನೆಯ ಬಗ್ಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಎಚ್.ಎಸ್. ದೊರೆಸ್ವಾಮಿ ಹೈಕೋರ್ಟಿನಲ್ಲಿ ನೀಡಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ದ್ವಿಸದಸ್ಯ ಪೀಠ ರಾಜ್ಯ ಸರಕಾರದ ಬಳಿ ಮಾಹಿತಿ ಕೇಳಿತ್ತು.
ಸರಕಾರದ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಗೋಲಿಬಾರ್ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ಪೂರ್ಣಗೊಂಡಿದ್ದು, ಅದನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ ಪೊಲೀಸರಿಂದ ಯಾವುದೇ ಲೋಪವಾಗಿಲ್ಲ. ವರದಿಯನ್ನು ಸರಕಾರ ಸ್ವೀಕಾರ ಮಾಡಿದೆ. ಘಟನೆ ಬಗ್ಗೆ ಆರೋಪಿತರು ಮತ್ತು ಆಸ್ತಿಪಾಸ್ತಿ ಹಾನಿ ಮಾಡಿದವರ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮ್ಯಾಜಿಸ್ಟೀರಿಯಲ್ ತನಿಖಾ ವರದಿಯನ್ನು ಸ್ವೀಕರಿಸಿದ ನ್ಯಾಯಪೀಠ, ಸಿಐಡಿ ತನಿಖೆಯ ವರದಿಯನ್ನೂ ಅಫಿಡವಿಟ್ ಮೂಲಕ ಕೋರ್ಟಿಗೆ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಅದಲ್ಲದೆ, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವರದಿಯನ್ನು ಪರಿಶೀಲನೆ ಮಾಡಲಾಗುವುದು. ಇದರ ಪ್ರತಿಯನ್ನು ಅಗತ್ಯವಿದ್ದರೆ ಈ ಪ್ರಕರಣದ ಅರ್ಜಿದಾರರ ಪರ ವಕೀಲರು ಪಡೆದುಕೊಳ್ಳಬಹುದು ಎಂದು ಹೇಳಿ, ಮುಂದಿನ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.
ಆದರೆ, ಅರ್ಜಿದಾರರ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಮ್ಯಾಜಿಸ್ಟೀರಿಯಲ್ ತನಿಖೆಯನ್ನೇ ಆಕ್ಷೇಪಿಸಿದ್ದಾರೆ. ಪೊಲೀಸರ ವಿರುದ್ಧದ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಅದೇ ಇಲಾಖೆಯ ಸುಪರ್ದಿಯಲ್ಲಿದ್ದುಕೊಂಡು ನಡೆಸಿದ್ದಾರೆ ಎನ್ನುವುದೇ ಹಾಸ್ಯಾಸ್ಪದ ಎಂದಿದ್ದಾರೆ. ಹಾಗಿದ್ದರೂ ಪೊಲೀಸರ ವಿರುದ್ಧ ಹತ್ತು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ, ಅದ್ಯಾವುದೇ ದೂರಿನ ಬಗ್ಗೆ ಎಫ್ಐಆರ್ ದಾಖಲಾಗಿಲ್ಲ. ಅದರ ಬಗ್ಗೆ ತನಿಖೆಯೂ ನಡೆದಿಲ್ಲ ಎಂದು ರವಿವರ್ಮ ಕುಮಾರ್ ತಿಳಿಸಿದ್ದಾರೆ.

ಇದಲ್ಲದೆ, ಪೊಲೀಸರ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಕಳೆದ ಜುಲೈನಲ್ಲಿ ಕೋರ್ಟ್ ನಿರ್ದೇಶನ ನೀಡಿತ್ತು. ಆ ಬಗ್ಗೆ ಈವರೆಗೂ ಸರಕಾರದ ಕಡೆಯಿಂದ ಯಾವುದೇ ಮಾಹಿತಿಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿಲ್ಲ ಎಂದು ಅರ್ಜಿದಾರ ಪರ ವಕೀಲರು ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿ, ಆನಂತರ ನಡೆದಿದ್ದ ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವು ಕಂಡಿದ್ದರು.
The state government has told the high court that the police were not at fault relating to the firing resorted to by the policemen to quell the anti-citizenship amendment act protest in Mangaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm