ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm