ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm