ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm