ಬ್ರೇಕಿಂಗ್ ನ್ಯೂಸ್
30-10-21 12:56 pm Mangaluru Correspondent ಕರಾವಳಿ
ಮಂಗಳೂರು, ಅ.30: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕಳೆದ ನಾಲ್ಕು ದಿನಗಳಿಂದ ವಾದ - ಪ್ರತಿವಾದ ನಡೆದಿತ್ತು. ಆರೋಪಿ ಪರವಾಗಿ ನಗರದ ಖ್ಯಾತ ಕ್ರಿಮಿನಲ್ ವಕೀಲರಲ್ಲಿ ಒಬ್ಬರಾದ ಅರುಣ್ ಬಂಗೇರ ವಾದ ಮಂಡಿಸಿದ್ದರು. ಮೂರು ದಿನಗಳ ವಾದ ಆಲಿಸಿದ ನ್ಯಾಯಾಲಯ, ಶುಕ್ರವಾರ ತೀರ್ಪು ನೀಡಿದೆ. ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಕಾನೂನು ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರ ಶಿಸ್ತು ಕ್ರಮಕ್ಕೆ ಅಡ್ಡಿ ಬರುವುದು ಸರಿಯಲ್ಲ ಎಂದು ಹೇಳಿ ಬಂಧನವನ್ನು ನಿರಾಕರಿಸುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟು ಪೊಲೀಸರಿಂದ ಬಂಧಿತರಾಗಿದ್ದ ಧ್ರುವ ಮತ್ತು ಮಹಾಲಕ್ಷ್ಮಿ ಹೆಗ್ಡೆ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೇ ವೇಳೆ, ವಕೀಲ ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿತನಾಗಿದ್ದ ಅನಂತ್ ಭಟ್ ಕೂಡ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಆದರೆ, ಪ್ರಮುಖ ಆರೋಪಿ ಕೆಎಸ್ಎನ್ ರಾಜೇಶ್, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆಂಬ ಪ್ರತಿವಾದವನ್ನು ಪುರಸ್ಕರಿಸಿದ್ದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ಕಾನೂನು ವಿದ್ಯಾರ್ಥಿನಿ ಯುವತಿ, ಆರೋಪಿ ವಕೀಲನ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್ಶಿಪ್ಗೆ ಸೇರಿದ್ದರು. ಕಚೇರಿಯಲ್ಲಿದ್ದಾಗ ಸೆ.25 ರಂದು ಸಂಜೆ ಯುವತಿಗೆ ವಕೀಲ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದೂರು ನೀಡಲಾಗಿತ್ತು. ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ.18ರಂದು ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
Sexual Harassment Advocate KSN Rajesh Bail plea rejected. The police have booked advocate and a Special Public Prosecutor for the Lokayukta K.S.N. Rajesh on the charge of sexually harassing a law student in the city.A complaint from the victim has been registered under Sections 376, 376 (2)(f), 376(2)(k), 376(c), 354 (A), 354 (B), 354 (C), 354 (D), 506, 384, 388 and 389 of Indian Penal Code.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm