ಬ್ರೇಕಿಂಗ್ ನ್ಯೂಸ್
31-10-21 01:43 pm Mangaluru Correspondent ಕರಾವಳಿ
ಉಳ್ಳಾಲ, ಅ.31 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ ಸಂಚರಿಸುತ್ತಿದ್ದ ಬಗ್ಗೆ ಸುದ್ದಿಯಾಗಿದ್ದು ಸ್ಥಳೀಯರಲ್ಲಿ ಚಿರತೆಯ ಗುಮ್ಮ ಮನೆ ಮಾಡಿತ್ತು. ಕುಂಪಲ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಜಾಸ್ತಿಯಾಗಿದ್ದು ನಾಯಿಗಳ ಮಾಂಸ ಅರಸಿ ಚಿರತೆ ಬಂದಿದೆಯೋ ಎಂದು ಕುಂಪಲದ ಜನರು ಹೇಳುತ್ತಿದ್ದರು.
ನಿನ್ನೆ ರಾತ್ರಿ ಕುಂಪಲ ಸಮೀಪದ ಪಿಲಾರು ಪಳ್ಳ ಎಂಬ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೋರ್ವರು ಚಿರತೆಯನ್ನ ಕಣ್ಣಾರೆ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚುವಂತೆ ಮಾಡಿದೆ. ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಎಂಬವರು ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ತನ್ನ ಮನೆಯಿಂದ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಬಳಿಯೇ ಚಿರತೆಯೊಂದು ರಸ್ತೆ ದಾಟಿ ಪೊದೆಯೊಳಗೆ ನುಗ್ಗಿದನ್ನ ಕಣ್ಣಾರೆ ಕಂಡಿದ್ದಾರೆ. ಮೊದಲಿಗೆ ಶಿವರಾಜ್ ಅವರು ಬೆಕ್ಕೆಂದು ಗ್ರಹಿಸಿದರೂ ಅದರ ಉದ್ದನೆಯ ಬಾಲ ಮತ್ತು ಬಣ್ಣವನ್ನ ಕಂಡು ಸಣ್ಣ ಗಾತ್ರದ ಚಿರತೆಯೆಂದು ಮನದಟ್ಟು ಮಾಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದುದರಿಂದ ಚಿರತೆಯ ಹೆಜ್ಜೆ ಗುರುತು ಮಾಸಿದೆ.






ಕುಂಪಲದಲ್ಲಿ ಚಿರತೆ ಇರುವ ಗುಮ್ಮಕ್ಕೆ ಇದೀಗ ಪ್ರತ್ಯಕ್ಷ ಸಾಕ್ಷಿ ದೊರೆತ್ತಿದ್ದು ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಹೆಚ್ಚಿದೆ. ಪಿಲಾರು ಪಳ್ಳದ ಸರಳಾಯ ಕಾಲನಿ ಹತ್ತಿರ ವಿಶಾಲ ಗುಡ್ಡ ಪ್ರದೇಶವಿದ್ದು ಕಾಡು ಇದೆ. ಇಲ್ಲಿ ಕಾಡು ಹಂದಿ, ಮುಳ್ಳು ಹಂದಿ, ನವಿಲು, ಉಡ ಮುಂತಾದ ವನ್ಯ ಜೀವಿಗಳು ಸಂಚರಿಸುತ್ತಿರುತ್ತವೆ ಎಂದು ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯವರಿಗೆ ಕುಂಪಲದಲ್ಲಿ ಚಿರತೆ ಇರುವಿಕೆಯ ಬಗ್ಗೆ ಯಾವುದೇ ದೂರು ಬಂದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.
Mangalore Kumpala Resident spots Cheetah near Pillar localities in fear. Two days ago they were rumours that Cheetah was seen by some people but again last night Pillar resident who saw the cheetah has put localities in great fear.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm