ಬ್ರೇಕಿಂಗ್ ನ್ಯೂಸ್
31-10-21 01:43 pm Mangaluru Correspondent ಕರಾವಳಿ
ಉಳ್ಳಾಲ, ಅ.31 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ ಸಂಚರಿಸುತ್ತಿದ್ದ ಬಗ್ಗೆ ಸುದ್ದಿಯಾಗಿದ್ದು ಸ್ಥಳೀಯರಲ್ಲಿ ಚಿರತೆಯ ಗುಮ್ಮ ಮನೆ ಮಾಡಿತ್ತು. ಕುಂಪಲ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಜಾಸ್ತಿಯಾಗಿದ್ದು ನಾಯಿಗಳ ಮಾಂಸ ಅರಸಿ ಚಿರತೆ ಬಂದಿದೆಯೋ ಎಂದು ಕುಂಪಲದ ಜನರು ಹೇಳುತ್ತಿದ್ದರು.
ನಿನ್ನೆ ರಾತ್ರಿ ಕುಂಪಲ ಸಮೀಪದ ಪಿಲಾರು ಪಳ್ಳ ಎಂಬ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೋರ್ವರು ಚಿರತೆಯನ್ನ ಕಣ್ಣಾರೆ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚುವಂತೆ ಮಾಡಿದೆ. ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಎಂಬವರು ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ತನ್ನ ಮನೆಯಿಂದ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಬಳಿಯೇ ಚಿರತೆಯೊಂದು ರಸ್ತೆ ದಾಟಿ ಪೊದೆಯೊಳಗೆ ನುಗ್ಗಿದನ್ನ ಕಣ್ಣಾರೆ ಕಂಡಿದ್ದಾರೆ. ಮೊದಲಿಗೆ ಶಿವರಾಜ್ ಅವರು ಬೆಕ್ಕೆಂದು ಗ್ರಹಿಸಿದರೂ ಅದರ ಉದ್ದನೆಯ ಬಾಲ ಮತ್ತು ಬಣ್ಣವನ್ನ ಕಂಡು ಸಣ್ಣ ಗಾತ್ರದ ಚಿರತೆಯೆಂದು ಮನದಟ್ಟು ಮಾಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದುದರಿಂದ ಚಿರತೆಯ ಹೆಜ್ಜೆ ಗುರುತು ಮಾಸಿದೆ.






ಕುಂಪಲದಲ್ಲಿ ಚಿರತೆ ಇರುವ ಗುಮ್ಮಕ್ಕೆ ಇದೀಗ ಪ್ರತ್ಯಕ್ಷ ಸಾಕ್ಷಿ ದೊರೆತ್ತಿದ್ದು ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಹೆಚ್ಚಿದೆ. ಪಿಲಾರು ಪಳ್ಳದ ಸರಳಾಯ ಕಾಲನಿ ಹತ್ತಿರ ವಿಶಾಲ ಗುಡ್ಡ ಪ್ರದೇಶವಿದ್ದು ಕಾಡು ಇದೆ. ಇಲ್ಲಿ ಕಾಡು ಹಂದಿ, ಮುಳ್ಳು ಹಂದಿ, ನವಿಲು, ಉಡ ಮುಂತಾದ ವನ್ಯ ಜೀವಿಗಳು ಸಂಚರಿಸುತ್ತಿರುತ್ತವೆ ಎಂದು ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯವರಿಗೆ ಕುಂಪಲದಲ್ಲಿ ಚಿರತೆ ಇರುವಿಕೆಯ ಬಗ್ಗೆ ಯಾವುದೇ ದೂರು ಬಂದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.
Mangalore Kumpala Resident spots Cheetah near Pillar localities in fear. Two days ago they were rumours that Cheetah was seen by some people but again last night Pillar resident who saw the cheetah has put localities in great fear.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm