ಬ್ರೇಕಿಂಗ್ ನ್ಯೂಸ್
01-11-21 10:56 am Mangaluru Correspondent ಕರಾವಳಿ
ಮಂಗಳೂರು, ನ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಧ್ವಜಾರೋಹಣ ನೆರವೇರಿಸಿದ ವೇಳೆ, ರಾಷ್ಟ್ರ ಧ್ವಜವನ್ನೇ ಉಲ್ಟಾ ಹಾರಿಸಿ ಅಪಮಾನ ಎಸಗಲಾಗಿದೆ.
ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು ಉಸ್ತುವಾರಿ ಸಚಿವರು ಅದರ ಹಗ್ಗ ಎಳೆದು ಹಾರಿಸಿದ್ದಾರೆ. ಸಚಿವ ಅಂಗಾರ ಧ್ವಜಕ್ಕೆ ಸೆಲ್ಯೂಟ್ ಹೊಡೆಯುತ್ತಿದ್ದಂತೆ ಜೊತೆಗಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ನೆರೆದಿದ್ದವರೆಲ್ಲ ಎದ್ದು ನಿಂತು ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಆಬಳಿಕ ಸಹಜ ಎಂಬಂತೆ ರಾಷ್ಟ್ರ ಗೀತೆಯನ್ನು ಹಾಡಲಾಗಿದೆ.

ಆದರೆ ತ್ರಿವರ್ಣ ಧ್ವಜ ತಲೆಕೆಳಗಾಗಿ ಹಾರಿದ್ದು ಅಲ್ಲಿದ್ದವರಿಗೆ ಅಲ್ಲಿವರೆಗೂ ಗೊತ್ತಿರಲಿಲ್ಲ. ಆನಂತರ ಅಧಿಕಾರಿಗಳು ಧ್ವಜ ತಲೆಕೆಳಗಾಗಿದ್ದನ್ನು ಗಮನಿಸಿ ಮತ್ತೆ ಕೆಳಗಿಳಿಸಿ ಸರಿ ಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಸ್ತುವಾರಿ ಸಚಿವ ಅಂಗಾರ, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್ ಸೇರಿದಂತೆ ಅಧಿಕಾರಿ ವರ್ಗ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.
ಈ ಹಿಂದೆ ತಾಲೂಕು ಮಟ್ಟದಲ್ಲಿ ಕೆಲವು ಕಡೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಎಡವಟ್ಟು ಆಗಿದ್ದಿದೆ. ಆದರೆ, ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಂಗಳೂರಿನ ಮಟ್ಟಿಗೆ ಇದೇ ಮೊದಲಿಗೆ ಈ ರೀತಿಯ ತಪ್ಪು ನಡೆದಿದೆ. ಅಧಿಕಾರಿ ವರ್ಗದ ಗಂಭೀರ ಪ್ರಮಾದ ಅಲ್ಲಿ ಸೇರಿದ್ದ ಎಲ್ಲರನ್ನೂ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾಮಾನ್ಯವಾಗಿ ಸಿಎಆರ್ ಸಿಬಂದಿ ಬೆಳಗ್ಗೆ ಬೇಗ ಬಂದು ಧ್ವಜ ಸ್ತಂಭಕ್ಕೆ ಧ್ವಜ ಏರಿಸುವ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣ ತಪ್ಪು ನಡೆದಿರುವ ಸಾಧ್ಯತೆ ಇದೆ. ಇವರ ಮೇಲೆ ಗಂಭೀರ ಕ್ರಮ ಜರುಗುವ ಸಾಧ್ಯತೆ ಇದೆ. ಕನ್ನಡ ಭುವನೇಶ್ವರಿಗೆ ವಂದಿಸಿ, ಕರ್ನಾಟಕ ಜನ್ಮತಾಳಿದ ವರ್ಷವನ್ನು ನವೆಂಬರ್ ಒಂದರಂದು ಆಚರಿಸಲಾಗುತ್ತದೆ. ಅದರ ಪ್ರಕಾರ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿಯಂತೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿತ್ತು.
Karnataka Rajyotsava 2021 Flag hoisted in opposite direction in Mangalore, embarrassment for leaders and guests on stage
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm