ಬ್ರೇಕಿಂಗ್ ನ್ಯೂಸ್
01-11-21 01:55 pm Mangaluru Correspondent ಕರಾವಳಿ
ಉಳ್ಳಾಲ, ಅ.31: ಸೋಮೇಶ್ವರ ಕಡಲ ಕಿನಾರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರಾವಳಿ ಕಾವಲು ಪಡೆಯ ತಾತ್ಕಾಲಿಕ ಜೀವರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಪ್ರಶಸ್ತಿ ಪಡೆದವರಲ್ಲಿ ಬಹುತೇಕ ಉಳ್ಳಾಲದವರಿಗೇ ಸಿಂಹಪಾಲು ಸಿಕ್ಕಿದೆ.
ಸೋಮೇಶ್ವರ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯ ಜೀವರಕ್ಷಕ ವಿಭಾಗದ ತಾತ್ಕಾಲಿಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್ ಸೋಮೇಶ್ವರ ಅವರು ತನ್ನ ಪ್ರಾಣದ ಹಂಗು ತೊರೆದು ಸಮುದ್ರ ಪಾಲಾಗುತ್ತಿದ್ದ ಅನೇಕ ಪ್ರವಾಸಿಗರ ಅಮೂಲ್ಯ ಪ್ರಾಣವನ್ನ ರಕ್ಷಿಸಿದ್ದಾರೆ. ಅಶೋಕ್ ಅವರ ನಿಸ್ವಾರ್ಥ ಸಾಹಸದ ಸೇವೆಗೆ 2021ರ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಇಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್.ಅಂಗಾರ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.


ಅಶೋಕ್ ಸೋಮೇಶ್ವರ ಅವರ ಸಾಹಸಮಯ ಜೀವ ರಕ್ಷಕ ಸೇವೆಯನ್ನ ಮೆಚ್ಚಿ ಅನೇಕ ಸಂಘ ಸಂಸ್ಥೆಗಳು ಅವರನ್ನ ಗುರುತಿಸಿ ಗೌರವಿಸಿದೆ. ಅದರಲ್ಲೂ ಅಶಕ್ತರ ಆಶಾಕಿರಣವಾಗಿ ಕರಾವಳಿಯಲ್ಲಿ ಗುರುತಿಸಿಕೊಂಡಿರುವ ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ಅಶೋಕ್ ಅವರನ್ನ ಸೋಮೇಶ್ವರ ಕಡಲ ತೀರದಲ್ಲಿಯೇ ಸನ್ಮಾನಿಸಿ ಗೌರವಿಸಿತ್ತು. ಅಶೋಕ್ ಅವರ ಪ್ರಾಮಾಣಿಕ ಸೇವೆಗೆ ಸಾಯಿ ಪರಿವಾರ್ ನ ಗೌರವ ಸಲಹೆಗಾರರೂ, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಅವರು ಸರಕಾರದಿಂದ ಸೂಕ್ತ ಗೌರವ ಮತ್ತು ವೃತ್ತಿ ಭದ್ರತೆಯನ್ನ ನೀಡೋದಾಗಿಯೂ ಹೇಳಿದ್ದರು. ಇದೀಗ ಸರಳ, ಪ್ರಾಮಾಣಿಕ ಸೇವಕರಾದ ಅಶೋಕ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಉಳ್ಳಾಲಕ್ಕೆ ಸಿಂಹಪಾಲು
ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಉಳ್ಳಾಲದ ಸಾಧಕರಿಗೆ ಸಿಂಹಪಾಲು ಸಿಕ್ಕಿದೆ. ಜಿಲ್ಲೆಯ ಒಟ್ಟು 58 ಪ್ರಶಸ್ತಿಗಳಲ್ಲಿ ಉಳ್ಳಾಲಕ್ಕೆ ಈ ಬಾರಿ 7 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಸಮಾಜ ಸೇವೆಯಲ್ಲಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಸಾಹಿತ್ಯದಲ್ಲಿ ಡಾ.ಅರುಣ್ ಉಳ್ಳಾಲ್, ಮಾಧ್ಯಮ ಕ್ಷೇತ್ರದಲ್ಲಿ ಪೊಸಕುರಲ್ ತುಳು ವಾಹಿನಿಯ ನಿರ್ದೇಶಕರಾದ ವಿಧ್ಯಾಧರ ಶೆಟ್ಟಿ ವೈಯಕ್ತಿಕ ನೆಲೆಯಲ್ಲಿ ಪ್ರಶಸ್ತಿ ಬಾಚಿದ್ದು, ಸಂಘ ಸಂಸ್ಥೆಗಳಾದ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್, ಉಳ್ಳಾಲದ ಹೆಲ್ಪ್ ಇಂಡಿಯಾ ಫೌಂಡೇಷನ್, ಕುಂಪಲದ ಕೇಸರಿ ಮಿತ್ರವೃಂದ ಮತ್ತು ಕಿನ್ಯದ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲವು ಪ್ರಶಸ್ತಿ ಬಾಚಿಕೊಂಡಿದೆ.
Mangalore Life garud Ashok Someshwara conferred with Rajyotasava award 2021.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm