ಬ್ರೇಕಿಂಗ್ ನ್ಯೂಸ್
12-09-20 12:30 pm Mangalore Reporter ಕರಾವಳಿ
ವಿಟ್ಲ , ಸೆಪ್ಟೆಂಬರ್ 11: ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕರು ಸಾರ್ವಜನಿಕರ ಎದುರಲ್ಲೇ ತರಾಟೆಗೆತ್ತಿಕೊಂಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರ್ ಆಗಿ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು, ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಚೇರಿ ಹೊರಗೆ ಸ್ವಲ್ಪ ಹೊತ್ತು ನಿಂತು ಏಕಾಏಕಿ ಕಚೇರಿ ಒಳಗೆ ಪ್ರವೇಶಿಸಿದ ಶಾಸಕರು, ನಿಮ್ಮ ಬಗ್ಗೆ ಕಳೆದ ಒಂದು ತಿಂಗಳುಗಳಿಂದ ದೂರುಗಳು ಬರುತ್ತಿವೆ. ನೀವು ಬೆಳಗ್ಗೆ 11 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ಪೂರ್ಣಗೊಳ್ಳದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು ಬಂದು ಕೆಲವು ಹೊತ್ತು ಕಳೆದರೂ ಹೊರಗಡೆ ನಿಂತುಕೊಂಡಿದ್ದೆ. ಶಾಸಕರ ಜತೆ ಹೇಗೆ ನಡೆದುಕೊಳ್ಳಬೇಕೆಂದು ನಿಮಗೆ ಗೊತ್ತಿಲ್ಲ. ಇನ್ನೂ ಜನರನ್ನು ಯಾವ ರೀತಿ ನಡೆಸಿಕೊಳ್ಳುತ್ತೀರಿ.. ಸ್ವಲ್ಪವಾದರೂ ಜವಾಬ್ದಾರಿ ಇದೆಯಾ ನಿಮಗೆ ಎಂದು ಪ್ರಶ್ನಿಸಿದ್ದಾರೆ?

ಇದಕ್ಕೆ ಪ್ರತಿಕ್ರಿಯಿಸಿದ ಉಪ ನೋಂದಣಾಧಿಕಾರಿ ಪ್ರೇಮಾ, ನೀವು ಹಾಗೆ ಮಾತನಾಡಬೇಡಿ ಸರ್.. ಇಲ್ಲಿ ಸರ್ವರ್ ಸಮಸ್ಯೆ ಇದೆ. ಇಲ್ಲಿ ಇಬ್ಬರು ಮಾತ್ರ ಸಿಬ್ಬಂದಿ ಮಾತ್ರ ಇರುವುದು. ಕಂಪ್ಯೂಟರ್ ಕೂಡಾ ಕೈ ಕೊಡುತ್ತಿದೆ. ಈ ಸಮಸ್ಯೆಯಿಂದ ಕೆಲಸ ತಡವಾಗುತ್ತದೆ. ನಾನು ಸಮಯಕ್ಕೆ ಸರಿಯಾಗಿ ಕರ್ತವ್ಯ ಹಾಜರಾಗುತ್ತಿದ್ದೇನೆ. ಟೋಕನ್ ನೀಡಿದ ಎಲ್ಲರ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸರಿಪಡಿಸುವ ಜವಾಬ್ದಾರಿ ನಿಮ್ಮದಾಗಿದೆ. ತಮ್ಮ ಕೆಲಸ ಕಾರ್ಯಗಳಿಗೆ ಬರುವ ಜನರಿಗೆ ಯಾವುದೇ ಸಮಸ್ಯೆ ಆಗಬಾರದು. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದರು. ಸಮಸ್ಯೆ ಇದ್ದರೆ ಮೇಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿ.. ಇಲ್ಲಿಯ ಪರಿಸ್ಥಿತಿಯ ಬಗ್ಗೆ ವಿವರಿಸಿ, ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು.
Video:
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am