ಬ್ರೇಕಿಂಗ್ ನ್ಯೂಸ್
07-11-21 02:01 pm Mangaluru Correspondent ಕರಾವಳಿ
ಉಳ್ಳಾಲ, ನ.7: ತೊಕ್ಕೊಟ್ಟಿನಿಂದ ಕುತ್ತಾರು ತನಕದ ಮಂಗಳೂರು ವಿ.ವಿ ರಸ್ತೆಯು ಅಗಲೀಕರಣಗೊಳ್ಳುತ್ತಿದ್ದು , ಬಬ್ಬುಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸಮರ್ಪಕ ತಡೆಗೋಡೆ ಕಾಮಗಾರಿಯಿಂದಾಗಿ ಮಳೆ ನೀರು ಆಸುಪಾಸಿನ ಅಂಗಡಿ, ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತೊಕ್ಕೊಟ್ಟು- ಕುತ್ತಾರು ವಿವಿ ರಸ್ತೆ ಅಗಲೀಕರಣ ಆಗುತ್ತಿರುವುದರಿಂದ ಬಬ್ಬುಕಟ್ಟೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಮುನ್ನೆಚ್ಚರಿಕೆ ವಹಿಸದೆ ತಡೆಗೋಡೆ ನಿರ್ಮಾಣ ಕೆಲಸ ನಡೆಸುತ್ತಿರುವ ಪರಿಣಾಮ ನಿನ್ನೆ ರಾತ್ರಿ ಸುರಿದ ಮಳೆ ನೀರು ಪರಿಸರದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಬ್ಬುಕಟ್ಟೆ ರಸ್ತೆಯ ಪಕ್ಕದ ಪಿಲಾರು ಹೊಸಗದ್ದೆ ಪರಿಸರದ ಇಪ್ಪತ್ತಕ್ಕೂ ಹೆಚ್ಚು ಮನೆಗಳು, ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ.





ಪಿಲಾರು ಹೊಸಗದ್ದೆ ನಿವಾಸಿ ಎವರೆಸ್ಟ್ ಡಿ ಸೋಜಾ ಅವರ ವಾಣಿಜ್ಯ ಸಂಕೀರ್ಣ, ಮನೆಗಳಿಗೆ ಮಳೆ ನೀರು ನುಗ್ಗಿದ್ದಲ್ಲದೆ , ಮನೆ ಅಂಗಳದ ಬಾವಿಗೂ ಮಳೆಯ ಕೊಳಚೆ ನೀರು ಸೇರಿ ಕಲುಷಿತಗೊಂಡಿದೆ. ಪಿಲಾರು ಹೊಸಗದ್ದೆ ಪರಿಸರದಲ್ಲಿ ಉಳ್ಳಾಲ ನಗರಸಭೆ ನಿರ್ಮಿಸಿರುವ ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು ಕಳೆದ ವರ್ಷವೂ ಇದೇ ರೀತಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.


ಸ್ಥಳಕ್ಕೆ ರಸ್ತೆ ಅಗಲೀಕರಣ ಕಾಮಗಾರಿಯ ಗುತ್ತಿಗೆ ಕಂಪನಿಯ ಮುಖ್ಯಸ್ಥ ಭೇಟಿ ನೀಡಿದ್ದು ಸ್ಥಳೀಯರು ಆತನನ್ನ ತರಾಟೆಗೆ ತೆಗೆದಿದ್ದಾರೆ. ತಡೆಗೋಡೆ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ವಹಿಸಿದ ಫಲವಾಗಿ ಮಳೆನೀರು ರಾಜಕಾಲುವೆ ಬಿಟ್ಟು ಮನೆಗಳಿಗೆ ನುಗ್ಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಸಂಜೆಯೊಳಗೆ ಸಮಸ್ಯೆಯನ್ನ ಬಗೆಹರಿಸಿ ಕೊಡುವುದಾಗಿ ಗುತ್ತಿಗೆ ಕಂಪನಿ ಮುಖ್ಯಸ್ಥರು ಸ್ಥಳೀಯರಿಗೆ ಭರವಸೆ ಕೊಟ್ಟಿದ್ದಾರೆ.
Road Widening creates havoc after heavy rains, Houses lashed with rainwater in Thokottu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm